2028ರ ಚುನಾವಣೆಯಲ್ಲಿ ಬಂಟ್ವಾಳದಿಂದ ಬಿ. ರಮಾನಾಥ್ ರೈ ಸ್ಪರ್ಧೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ಬಿ. ರಮಾನಾಥ್ ರೈ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ರಮಾನಾಥ್ ರೈ ಅವರು ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ ಎಂದು ಹೇಳಿದರು. “2013ರಿಂದ 2018ರವರೆಗೆ ರಮಾನಾಥ್ ರೈ ಅವರ ಅವಧಿಯನ್ನು ಅವರು…