10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯಲ್ಲಿ ಅಕ್ರಮ ಆರೋಪ

ಮಂಜೇಶ್ವರ: ಜಿಲ್ಲಾ ಪಂಚಾಯತ್ ವತಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಟಾರ್ ಹಾಕಿ ನಿರ್ಮಿಸಿದ ಮುನ್ನಿಪಾಡಿ–ಮೀಯಪ್ಪದವು ರಸ್ತೆ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 300 ಮೀಟರ್ ಟಾರ್ ಕಾಮಗಾರಿಗೆ 10 ಲಕ್ಷ ರೂ. ಅಗತ್ಯವಿಲ್ಲ, ಆದರೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆಟೋ ರಿಕ್ಷಾ ಚಾಲಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆ ವರ್ಕಾಡಿ ಹಾಗೂ ಮೀಂಜ ಗ್ರಾಮ ಪಂಚಾಯತ್ ಪ್ರದೇಶಗಳ ಮೂಲಕ ಹಾದು ಹೋಗಿ, ಕರ್ನಾಟಕವನ್ನು ಸಂಪರ್ಕಿಸುವ…

Read More

ವಿಟ್ಲ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡುತ್ತಿದ್ದಾನೆ ಎನ್ನಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಸುಡುಮದ್ದುಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಳಗಾಗಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ‌ಬಂಧಿಸಲಾಗಿದೆ. ಆಂಧ್ರಪ್ರದೇಶದ ಲಕ್ಕು ಕೊಂಡಾ ರೆಡ್ಡಿ, ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 32/2015 ಕಲಂ 415, 417, 418, 419, 420, 421, 422, 406, 409, 120 (23) 3 149 ಅಡಿಯಲ್ಲಿ ‌ಪ್ರಕರಣ ದಾಖಲಾಗಿತ್ತು. Maithri Plantation and Horticulture Pvt Ltd ಎಂಬ ಸಂಸ್ಥೆಯ ಅಡಿಯಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣವನ್ನು ಡೆಪಾಸಿಟ್ ಮಾಡಿಸಿ ಸಾರ್ವಜನಿಕರಿಗೆ ಮೋಸ,…

Read More

ವೈದ್ಯರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

​ಮಂಜೇಶ್ವರ: ಉಪ್ಪಳದ ಆಸ್ಪತ್ರೆಯೊಂದರ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಕೋಡಿಬೈಲು ನಿವಾಸಿ ಉಮ್ಮರ್ (45) ಮತ್ತು ಆತನ ಸಹೋದರ ಹೈದರಾಲಿ (33) ಬಂಧಿತ ಆರೋಪಿಗಳು. ​ಈ ತಿಂಗಳ 4ರಂದು ರಾತ್ರಿ 8:30ರ ಸುಮಾರಿಗೆ ಉಪ್ಪಳ ರೈಲು ನಿಲ್ದಾಣ ರಸ್ತೆಯ ದೇವಿಪ್ರಸಾದ್ ಮಾವೆ ಆಸ್ಪತ್ರೆಯ ಆವರಣದಲ್ಲಿ ವೈದ್ಯ ಕುಮಾರ್ ಶಾಶ್ವತ್ (42) ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಈ ಕುರಿತು ದಾಖಲಾದ ದೂರಿನನ್ವಯ ಪೊಲೀಸರು ಕಾರ್ಯಾಚರಣೆ…

Read More

6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

ಮಂಗಳೂರು: 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

Read More

ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರ ಹೆಚ್ಚಿನ ಆದ್ಯತೆ: ಎಂ.ಎಲ್. ಅಶ್ವಿನಿ

ಕಾಞಂಗಾಡ್: ಕೇಂದ್ರ ಸರ್ಕಾರ ಜಾರಿಗೆ ತಂದ ಆರ್ಥಿಕ ಸುಧಾರಣೆಗಳು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡಿವೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು. ಅವರು ಅಂಬಲತ್ತರದ ಸ್ನೇಹ ವೀಟಿಲ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮೋದಿ ಆಡಳಿತದಲ್ಲಿ ರಾಷ್ಟ್ರಪತಿ ಸೇರಿದಂತೆ ಹಲವು ಮಹತ್ವದ ಹುದ್ದೆಗಳು…

Read More

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 21/2019, ಕಲ೦: 504, 323,,324, 326, 506 R./ w 34 IPC ಪ್ರಕರಣದಲ್ಲಿ ಆರೋಪಿಯಾಗಿರುವ ಕಡಬ ನಿವಾಸಿವಿನೋದ್ @.ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬುವವರು 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಅ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ….

Read More

ಮಾ.17ರಂದು ಉಡುಪಿಯಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ

ಉಡುಪಿ: ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಅಂಗಸಂಸ್ಥೆ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ವತಿಯಿಂದ ಮಾ.17ರಂದು ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಬನ್ನಂಜೆಯ ಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು…

Read More

ಮಂಜೇಶ್ವರದಲ್ಲಿ ಮಾರ್ಚ್ 8ರಂದು ಹಿಂದೂ ಸಂಗಮ ಕಾರ್ಯಕ್ರಮ

ಮಂಜೇಶ್ವರ: ಹಿಂದೂ ಸಂಗಮ ಆಯೋಜನ ಸಮಿತಿ ಮಂಜೇಶ್ವರ ಪಂಚಾಯತ್ ವತಿಯಿಂದ ಮಂಜೇಶ್ವರ ಹಿಂದೂ ಸಂಗಮ ಕಾರ್ಯಕ್ರಮವು ಮಾರ್ಚ್ 8ರಂದು ಎಸ್.ಎ.ಟಿ ಶಾಲಾ ಮೈದಾನದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 3 ಗಂಟೆಗೆ ಶ್ರೀಮತ್ ಅನಂತೇಶ್ವರ ದೇವಾಲಯದ ವಠಾರದಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದೆ. ಶೋಭಾಯಾತ್ರೆಯಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ತಂಡಗಳು ಭಾಗವಹಿಸಲಿದ್ದು, ಮಂಜೇಶ್ವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎಸ್.ಎ.ಟಿ ಶಾಲಾ ಮೈದಾನಕ್ಕೆ ಆಗಮಿಸಲಿದೆ. ಶೋಭಾಯಾತ್ರೆಯ ನಂತರ ಆದರ್ಶ ವ್ಯಕ್ತಿಗಳ ಅನಾವರಣ ಕಾರ್ಯಕ್ರಮ…

Read More

ಮಾ.9ರಂದು ಶಾಸಕರಿಗೆ ಬಜೆಟ್ ಕುರಿತು ಕಾರ್ಯಾಗಾರ: ಸಿಎಂ ಸಿದ್ದರಾಮಯ್ಯರಿಂದ ಮಾಹಿತಿ – ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ಬಜೆಟ್ ಕುರಿತು ಶಾಸಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 9ರಂದು ಸಂಜೆ 4 ಗಂಟೆಗೆ ಲಲಿತ್ ಅಶೋಕ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಪ್ರಾಮುಖ್ಯತೆ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆ, ಅನುದಾನಗಳ ವರ್ಗೀಕರಣ, ವಿಗುತೆ ಬಜೆಟ್ ಹಾಗೂ ಕೊರತೆ ಬಜೆಟ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಶಾಸಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ದೇಶದಲ್ಲಿ…

Read More
error: Content is protected !!