ಜೆಎಫ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ
ಮಂಗಳೂರು ನಗರದ ಬಜಾಲ್ ನಂತೂರಿನ ಜೆ ಎಫ್ ಅಸೋಸಿಯೇಷನ್ ವತಿಯಿಂದ, ಯೆನೆಪೊಯ ಬ್ಲಡ್ ಬ್ಯಾಂಕ್ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ಸಹಯೋಗದೊಂದಿಗೆ ಭಾನುವಾರ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಸಂಸ್ಥೆಯ ಅಧ್ಯಕ್ಷ ನಝೀರ್ ಬಜಾಲ್ ಅವರ ನೇತೃತ್ವದಲ್ಲಿ ನಡೆದ ಶಿಬಿರವನ್ನು ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಅಬ್ದುಲ್ ರವೂಫ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ರಕ್ತದಾನವು ಆರೋಗ್ಯವಂತ ವ್ಯಕ್ತಿಯ ಸಾಮಾಜಿಕ ಕರ್ತವ್ಯ. ರಕ್ತದಾನದಿಂದ ರೋಗಿಗಳು ಹಾಗೂ ಅಪಘಾತದಲ್ಲಿ ಗಾಯಗೊಂಡವರ…