ತಲಪಾಡಿ ಟೋಲ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಫ್ರೀ ಪಾಸ್ ನೀಡಲು ಬಿಜೆಪಿ ಮನವಿ

ತಲಪಾಡಿ ಟೋಲ್‌ಗೇಟ್‌ನಲ್ಲಿ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಉಚಿತ ಪಾಸಿಂಗ್ (ಫ್ರೀ ಪಾಸ್) ನೀಡುವಂತೆ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ತಲಪಾಡಿ ಟೋಲ್‌ನಲ್ಲಿ ತಲಪಾಡಿ ಗ್ರಾಮದ ವಾಹನಗಳಿಗೆ ನೀಡಿರುವಂತೆ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೂ ಫ್ರೀ ಪಾಸಿಂಗ್ ಸೌಲಭ್ಯ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., “ಈ ವಿಷಯದಲ್ಲಿ ಮಂಜೇಶ್ವರ ಶಾಸಕರಾಗಲಿ ಅಥವಾ ಸಂಸದರಾಗಲಿ…

Read More

ಇಫ್ತಾರ್ ಕೂಟದಿಂದ ಮನೆಗೆ ವಾಪಸ್ಸಾಗುವಾಗ ದುರ್ಘಟನೆ – ಸೈಕಲ್‌ನಿಂದ ಬಿದ್ದು ಬಾಲಕ ಸಾವು

ಕಾಸರಗೋಡು: ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮಗಳು ಅಸ್ಮ ಅವರ ಪುತ್ರ ಆಸೀಪ್ (12) ಮೃತಪಟ್ಟ ಬಾಲಕನಾಗಿದ್ದಾನೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಆಸೀಪ್‌ಗೆ ದೇಹದ ಒಳಭಾಗದಲ್ಲಿ ತೀವ್ರ ಪೆಟ್ಟು ತಗುಲಿದೆಯೆಂದು…

Read More

ಡಾ. ವಾಮನ್ ರಾವ್ ಬೇಕಲ್ – ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿ

ಕಾಸರಗೋಡು: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಇರುವ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ 22.02.2026 ರಂದು ನಡೆದ “ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026” ಕಾರ್ಯಕ್ರಮದಲ್ಲಿ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ದಂಪತಿಗಳಿಗೆ “ಗಡಿನಾಡ ಆದರ್ಶ ಕನ್ನಡ ದಂಪತಿಗಳು” ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಾಡೋಜ ಡಾ. ಕೃಷ್ಣ ಪ್ರಸಾದ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಡಾ. ಕೊಲಚಪ್ಪೆ ಗೋವಿಂದ ಭಟ್ ಅವರ ಅಧ್ಯಕ್ಷತೆಯಲ್ಲಿರುವ ದಕ್ಷಿಣ ಕನ್ನಡ…

Read More

ಕಾಸರಗೋಡು ಗೋ-ಕುಟೀರಕ್ಕೆ ದೇಶೀಯ ತಳಿ ಗೋವುಗಳ ದಾನಕ್ಕೆ ಆಹ್ವಾನ

ಕಾಸರಗೋಡು: ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕಾಸರಗೋಡು ಗೋ-ಕುಟೀರಕ್ಕೆ ಶುದ್ಧ ದೇಶೀಯ ತಳಿ ಹಾಗೂ ಗಿಡ್ಡ ತಳಿಯ ಗೋವುಗಳನ್ನು ದಾನ ರೂಪದಲ್ಲಿ ನೀಡಲು ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದೆ. ಕಾಸರಗೋಡು ಜಿಲ್ಲೆ ಸೇರಿದಂತೆ ಕೇರಳ ಮತ್ತು ಕರ್ನಾಟಕ ರಾಜ್ಯಗಳ ಗೋ-ಭಕ್ತರು, ಗೋ-ಪೋಷಕರು ಹಾಗೂ ಭಗವದ್ಭಕ್ತರ ಸಹಕಾರದೊಂದಿಗೆ ಈ ಯೋಜನೆಯನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.) ವತಿಯಿಂದ ಸ್ಥಾಪಿಸಲಾಗುತ್ತಿರುವ ಈ ಗೋ-ಕುಟೀರದಲ್ಲಿ ಕಾಸರಗೋಡು ಗಿಡ್ಡ ತಳಿ, ಮಲೆನಾಡು ಗಿಡ್ಡ ತಳಿ ಸೇರಿದಂತೆ ಶುದ್ಧ ದೇಶೀಯ…

Read More

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಕುರಿತು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಇತ್ತೀಚಿನ ಬಜೆಟ್ ಕುರಿತು ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೆಲವು ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ಣಿಕ್ ಅವರ ಹೇಳಿಕೆಯ ಪ್ರಕಾರ, ರಾಜ್ಯದ ಒಟ್ಟು ಸಾಲವು ಸುಮಾರು ₹8.24 ಲಕ್ಷ ಕೋಟಿಗೆ ಏರಿದ್ದು, ಬಜೆಟ್ ಗಾತ್ರವು ಸುಮಾರು ₹4.48 ಲಕ್ಷ ಕೋಟಿಯಷ್ಟಿದೆ. ಈ ಸಾಲಿನಲ್ಲಿ ಬಹಿರಂಗ…

Read More

ಸಿದ್ದರಾಮಯ್ಯ ಅವರ 17ನೇ ದಾಖಲೆಯ ಬಜೆಟ್: ಅಭಿವೃದ್ಧಿಗೆ ದಿಕ್ಕು ತೋರಿದ ಕಾರ್ಯಕ್ರಮಗಳು – ಕೆ. ಹರೀಶ್ ಕುಮಾರ್

ಮಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕೆ . ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ:ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಮೀನುಗಾರಿಕೆ…

Read More

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ ರಮಾನಾಥ ರೈ

ಕರ್ನಾಟಕ ಸರ್ಕಾರ ಮಂಡಿಸಿದ ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹವಾಗಿವೆ. ಜೊತೆಗೆ ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ,ವಸತಿ ,ಶಿಕ್ಷಣ ಕ್ಷೇತ್ರಕ್ಕೆ ಸೇರಿದಂತೆ ಎಲ್ಲಾ ವರ್ಗದ ಸಮುದಾಯದ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ಸಂತಸ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗು ಕರಾವಳಿ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ….

Read More

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ ವಿವಾದ

ಮಂಗಳೂರು: ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರದರ್ಶನ ಮಾಡದಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಉಚಿತ ಪ್ರದರ್ಶನಕ್ಕಾಗಿ ಮಾಡಿದ್ದ ಬುಕ್ಕಿಂಗ್ ಪೋಸ್ಟರ್‌ನಲ್ಲಿ ಮಹಿಳೆಯರ ಮೊಬೈಲ್ ನಂಬರ್‌ಗಳನ್ನು ಪ್ರಕಟಿಸಲಾಗಿತ್ತು. ಆ ನಂಬರ್‌ಗಳಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.ಮಹಿಳೆಯರಿಗೆ ನೇರವಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಕೆಲ ಕರೆಗಳು ವಿದೇಶದಿಂದಲೇ ಬಂದಿರುವ ಶಂಕೆ ವ್ಯಕ್ತವಾಗಿದೆ.ಇದಲ್ಲದೆ ಸ್ಥಳೀಯ ಮತಾಂಧ ಶಕ್ತಿಗಳಿಂದಲೂ ಬೆದರಿಕೆ…

Read More

ರಾಜ್ಯ ಬಜೆಟ್ ನಲ್ಲಿ ಕರಾವಳಿ ಸಂಪೂರ್ಣ ಕಡೆಗಣನೆಗೆ ಶಾಸಕ ಕಾಮತ್ ಆಕ್ರೋಶ:-

ಕಳೆದ ಬಾರಿ ಬಜೆಟ್ ಮಂಡಿಸುವಾಗ “ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿನ ಎಷ್ಟು ಘೋಷಣೆಗಳನ್ನು ಕರಾವಳಿ ಭಾಗದಲ್ಲಿ ಸಾಕಾರಗೊಳಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದಾಗ ಮಾತ್ರ ಇವರ ಈಗಿನ ಬಜೆಟ್ ಗೆ ತೂಕ ಬರುತ್ತದೆ. ಇಲ್ಲದಿದ್ದರೆ ಇದು ಕೇವಲ ಬಿಳಿ ಹಾಳೆ ಅಷ್ಟೇ ಆಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಮುಖ್ಯಮಂತ್ರಿಯಾಗಿ ಇದೇ ಅವರ ಕೊನೆಯ ಬಜೆಟ್ ಎಂದು ಕಾಂಗ್ರೆಸ್ ವಲಯದಲ್ಲೇ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದು, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ….

Read More
error: Content is protected !!