ಉಪ್ಪಳ ಅಗ್ನಿಶಾಮಕ ಹಾಗೂ ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಉಪ್ಪಳ: ಕೇರಳ ಅಗ್ನಿಶಾಮಕ ಹಾಗೂ ರಕ್ಷಣಾ ಕೇಂದ್ರದ ಉಪ್ಪಳ ಠಾಣೆಯ ನೂತನ ಆಧುನಿಕ ಕಟ್ಟಡವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್‌ಲೈನ್ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವು ಶಾಸಕ ಎ.ಕೆ.ಎಂ. ಅಶ್ರಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ವೇಳೆ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದರು. 2024–25ರ ಬಜೆಟ್ ಹಂಚಿಕೆಯಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಸುಮಾರು 396 ಚದರ ಮೀಟರ್ ವಿಸ್ತೀರ್ಣದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ.ಹಲವಾರು ವರ್ಷಗಳಿಂದ ಅಂಬಾರ್ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಗ್ನಿಶಾಮಕ…

Read More

ಮಂಗಲ್ಪಾಡಿ ಪಂಚಾಯತ್ ಸದಸ್ಯರು ಮತ್ತು ನೌಕರರಿಗೆ ನೀಡಿದ ಉಡುಗೊರೆಯ ಹಣಕಾಸಿನ ಮೂಲವನ್ನು ಬಹಿರಂಗಪಡಿಸಬೇಕು ಎಂದು ಡಿವೈಎಫ್‌ಐ

ಮಂಗಲ್ಪಾಡಿ ಪಂಚಾಯತ್ ಸದಸ್ಯರಿಗೆ ಲ್ಯಾಪ್‌ಟಾಪ್ ಹಾಗೂ ನೌಕರರಿಗೆ ಚಿನ್ನದ ನಾಣ್ಯಗಳನ್ನು ನೀಡಲು ಬಳಸಿದ ಹಣದ ಮೂಲವನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಡಿವೈಎಫ್‌ಐ ಮಂಜೇಶ್ವರಂ ಬ್ಲಾಕ್ ಸಮಿತಿ ಆಗ್ರಹಿಸಿದೆ. ಸರ್ಕಾರದಿಂದ ಇಂತಹ ಯಾವುದೇ ನಿರ್ದೇಶನ ಇಲ್ಲದಿರುವ ಸಂದರ್ಭದಲ್ಲಿ ಇದಕ್ಕಾಗಿ ಯಾವ ನಿಧಿಯನ್ನು ಬಳಸಲಾಗಿದೆ ಎಂಬುದನ್ನು ಆಯ್ಕೆಯಾದ ಅಧ್ಯಕ್ಷರೂ ಮತ್ತು ಇದಕ್ಕೆ ಸಹಕರಿಸಿದ ಕಾರ್ಯದರ್ಶಿಯೂ ಸ್ಪಷ್ಟಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಯೋಜನಾ ನಿಧಿಯಿಂದಲೋ ಅಥವಾ ಪಂಚಾಯತ್‌ನ ಸ್ವಂತ ನಿಧಿಯಿಂದಲೋ ಇದನ್ನು ನೀಡಲಾಗಿಲ್ಲವೆಂದಾದರೆ, ಅದರ ಹಣಕಾಸಿನ ಮೂಲವನ್ನು ವಿವರಿಸುವುದು ಸಂಬಂಧಪಟ್ಟವರ ಜವಾಬ್ದಾರಿಯಾಗಿದೆ….

Read More

“ಆದಿದ್ರಾವಿಡವು ಪ್ರತ್ಯೇಕ ಜಾತಿಯಲ್ಲ ಎಂಬ ಹೇಳಿಕೆಯಿಂದ ಅಸಮಾಧಾನ”: ಅನಿಲ್ ಕುಮಾರ್

ಮಂಗಳೂರು: ನ್ಯಾಯಮೂರ್ತಿ ನಾಗ್ ಮೋಹನ್‌ದಾಸ್ ಅವರು “ಆದಿದ್ರಾವಿಡವು ಪ್ರತ್ಯೇಕ ಜಾತಿಯಲ್ಲ, ಜಾತಿಗಳ ಗುಂಪು” ಎಂದು ನೀಡಿರುವ ಹೇಳಿಕೆಯಿಂದ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದೆ ಎಂದು ಆದಿದ್ರಾವಿಡ ಸಮುದಾಯದ ಮುಖಂಡ ಹಾಗೂ ಸಮಿತಿಯ ಸಲಹೆಗಾರ ಅನಿಲ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿ ಕ್ರಮದಲ್ಲಿ ಹಿಂದಿನ 101 ಜಾತಿಗಳನ್ನು ಪ್ರವರ್ಗ ಎ, ಬಿ, ಸಿ ಎಂದು ಮರುವರ್ಗೀಕರಿಸಿರುವುದರಿಂದ ಹಲವು ಗೊಂದಲಗಳು ಉಂಟಾಗಿವೆ ಎಂದು ಹೇಳಿದರು. ಹಲವು ದಶಕಗಳಿಂದ ಸರ್ಕಾರವೇ…

Read More

ಬಂಟ್ವಾಳದಲ್ಲಿ ಮಾ.14ರಂದು ರಾಷ್ಟ್ರೀಯ ಲೋಕ ಅದಾಲತ್: ಪೂರ್ವಭಾವಿ ಸಭೆ

ಬಂಟ್ವಾಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಾರ್ಚ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ ಪ್ರಕರಣಗಳು, ಎಂಎಂಆರ್‌ಡಿ ಪ್ರಕರಣಗಳು, ವಿವಾಹ ಸಮನ್ವಯ…

Read More

ಗಿರೀಶ್ ಪಿ ಎಂ ಇವರ ಶೈಕ್ಷಣಿಕ ಸಾಧನೆ ಗುರುತಿಸಿ ಮಡ್ಯಾರು ಶ್ರೀ ಪರಾಶಕ್ತಿ ಕ್ಷೇತ್ರದಿಂದ ಸನ್ಮಾನ

ಶ್ರೀ ಗುರುಪರಾಶಕ್ತಿ ಮಠ, ಮರಕಡ ಹಾಗೂ ಶ್ರೀ ಪರಾಶಕ್ತಿ ಕ್ಷೇತ್ರ, ಮಡ್ಯಾರು ಇದರ ಸ್ಥಾಪಕ ಮಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಯವರ ಪೂರ್ಣಾನುಗ್ರಹದೊಂದಿಗೆ, ಪೂಜನೀಯ ಮಾತೆ ಶಕುಂತಲಾ ಅಮ್ಮನವರು ಮತ್ತು ಶ್ರೀ ಕ್ಷೇತ್ರದ ಮಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ನಿತಿನ್ ನರೇಂದ್ರನಾಥ ಯೋಗೇಶ್ವರೇಶ್ವರ ಸ್ವಾಮಿಯವರ ನೇತೃತ್ವದಲ್ಲಿ ನಡೆದ ಶ್ರೀ ಪರಾಶಕ್ತಿ ಕ್ಷೇತ್ರ, ಮಡ್ಯಾರು ಇಲ್ಲಿನ ಇಪ್ಪತ್ತೆರಡನೇ ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ಅರ್ಹ ಸಾಧಕರಿಗೆ ‘ಪ್ರತಿಭಾ ಪುರಸ್ಕಾರ’ ಮತ್ತು ‘ಸನ್ಮಾನ’ ಕಾರ್ಯಕ್ರಮ…

Read More

ಮಚ್ಚಂಪಾಡಿ ಜಿ.ಸಿ.ಸಿ ಕೆ.ಎಂ.ಸಿ.ಸಿ ವತಿಯಿಂದ ಭವ್ಯ ‘ಗ್ರ್ಯಾಂಡ್ ಇಫ್ತಾರ್ ಮೀಟ್’

​ಮಂಜೇಶ್ವರ: ಕಾರುಣ್ಯ ಚಟುವಟಿಕೆಗಳಿಗೆ ಹೆಸರಾದ ಮಚ್ಚಂಪಾಡಿ ಜಿ.ಸಿ.ಸಿ ಕೆ.ಎಂ.ಸಿ.ಸಿ ವತಿಯಿಂದ ಮಚ್ಚಂಪಾಡಿ ಸಿ.ಎಚ್. ನಗರದಲ್ಲಿ ‘ಗ್ರ್ಯಾಂಡ್ ಇಫ್ತಾರ್ ಮೀಟ್’ ಆಯೋಜಿಸಲಾಯಿತು. ವಿಧವೆಯರು, ಅನಾಥರು ಹಾಗೂ ರೋಗಿಗಳಿಗೆ ಸಹಾಯಹಸ್ತ ಚಾಚುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಸ್ತಾದ್‌ಗಳಿಗೆ ನೀಡಲಾಗುವ ಈದ್ ಉಡುಗೊರೆಯನ್ನು ಹುಸೈನ್ ಮಚ್ಚಂಪಾಡಿ ಅವರು ಜಹಫರ್ ಅವರಿಗೆ ನೀಡುವ ಮೂಲಕ ಉದ್ಘಾಟಿಸಿದರು. ಈ ಬಾರಿ ಹಜ್ ಯಾತ್ರೆಗೆ ತೆರಳುವವರಿಗೆ ಆತ್ಮೀಯ ಸನ್ಮಾನ ಹಾಗೂ ಬೀಳ್ಕೊಡುಗೆ ನೀಡಲಾಯಿತು.ಜಿ.ಸಿ.ಸಿ ಕೆ.ಎಂ.ಸಿ.ಸಿ ಅಧ್ಯಕ್ಷ ಹುಸೈನ್ ಮಚ್ಚಂಪಾಡಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಖತೀಬ್…

Read More

ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ: ಮಹಿಳಾ ವ್ಯಾಪಾರಿಗಳ ಸಂಕಷ್ಟದ ಪರಿಶೀಲನೆ

ಮಂಗಳೂರು: ಮಂಗಳೂರಿನ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಗುರುವಾರ ಮಧ್ಯಾಹ್ನ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಭಾಗಕ್ಕೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟದ ಮೂಲಕ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ…

Read More

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಆಧಾರ್ ಕಾರ್ಡ್‌ಗಳನ್ನು ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ. ಆಧಾರ್ ಕಾರ್ಡ್‌ಗಳ ರಾಶಿ ಕಂಡ ಕೂಡಲೇ ಸ್ಥಳೀಯರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ…

Read More

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆಯನ್ನು ಕರೆಯಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್…

Read More

ಪುತ್ತೂರಿನಲ್ಲಿ ಸರ್ಕಾರಿ ಬಾವಿ, ಕೆರೆ ಒತ್ತುವರಿ ಆರೋಪ: ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆ ಕಟ್ಟಡದ ಸಮೀಪ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯಲ್ಲಿ ಭೂ ಅತಿಕ್ರಮಣ ಹಾಗೂ ಸಾರ್ವಜನಿಕ ಕೆರೆಯನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಸೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿರುವುದಾಗಿ ನೆಹರುನಗರ ನಿವಾಸಿ ಸಂತೋಷ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುತ್ತೂರು ಹೋಬಳಿಯ ಪುತ್ತೂರು ಕಸಬಾ ಗ್ರಾಮದ ಸರ್ವೆ ನಂ. 133/9ಎ ವ್ಯಾಪ್ತಿಯ ಸುಮಾರು 0.02 ಎಕರೆ ಸರ್ಕಾರಿ ಜಾಗದಲ್ಲಿ ಅನಾದಿ ಕಾಲದಿಂದ ಬಾವಿಯೊಂದು ಇದ್ದು, ಸ್ಥಳೀಯ ದೇವಿಯ ಆರಾಧನೆಗೆ…

Read More
error: Content is protected !!