ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಮಾಲಿನ್ಯಕ್ಕೆ ಜನರ ಆಕ್ರೋಶ
ಮಂಗಳೂರು: ಪಲ್ಗುಣಿ ನದಿ ಕಲುಶಿತಗೊಂಡಿದೆ. ಅದರ ದೇಖಿ ರೇಖಿ ನೋಡಬೇಕಾದ ಮಂಗಳೂರು ಮಹಾನಗರ ಪಾಲಿಕೆ ಕಣ್ಣುಮುಚ್ಚಿ,ಕಿವಿ ಮುಚ್ಚಿ, ಬಾಯಿ ಮುಚ್ಚಿ ಕುಳಿತಿದೆ. ಪಾಲಿಕೆ ನಿರ್ಲಕ್ಷಕ್ಕೆ ರಾಶಿ ರಾಶಿ ಮೀನುಗಳು ಸಾಯುತ್ತಿವೆ. ಮಂಗಳೂರು ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಲ್ಗುಣಿ ನದಿ ಕೆಲ ವರ್ಷಗಳ ಹಿಂದೆ ಜೀವಂತ ನದಿಯಾಗಿತ್ತು. ಮೀನುಗಳು ಬದುಕಿಕೊಂಡಿದ್ದವು. ನೀರೂ ಸ್ವಚ್ಚವಾಗಿತ್ತು. ಈಗ ಅದು ಮೀನುಗಳಿಗೆ ರುದ್ರಭೂಮಿಯಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ ಕಾಣುತ್ತಿದೆ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ ತಿರುಗಿದ್ದ…