ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ವಶದಿಂದ ಪರಾರಿ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್ಸಿಜೆ ಹಾಗೂ ಜೆಎಂಎಫ್ಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.118/24 ಪ್ರಕರಣ (ಕಲಂ 121(1), 132, 262 BNS) ಸಂಬಂಧ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ…