“ನಾನು ರಾಜೀನಾಮೆ ನೀಡಲ್ಲ, ಬೇಕಾದರೆ ವಜಾ ಮಾಡಲಿ” : ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಸಿಡಿತ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದ್ದು, ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ವಜಾಗೊಳಿಸಲಿ ಎಂದು ಅವರು ಸವಾಲು ಹಾಕಿದ್ದಾರೆ. ತೃಣಮೂಲ ಕಾಂಗ್ರೆಸ್ನ ನೂತನವಾಗಿ ಆಯ್ಕೆಯಾದ ಶಾಸಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ “ನ್ಯಾಯಸಮ್ಮತ ಚುನಾವಣೆ ನಡೆದಿಲ್ಲ, ಬದಲಾಗಿ ದೌರ್ಜನ್ಯ ನಡೆದಿದೆ” ಎಂದು ಆರೋಪಿಸಿದರು. “ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ನೈತಿಕ…