ಇಂಧನ ದರ ಏರಿಕೆ ವಿರೋಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಹೋಟೆಲ್ ಬಂದ್ ಮುಷ್ಕರ ಯಶಸ್ವಿ
ಮಂಜೇಶ್ವರ :ವಾಣಿಜ್ಯ ಬಳಕೆಯ ಇಂಧನ ದರವನ್ನು ಸತತವಾಗಿ ಏರಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಕರೆ ನೀಡಿದ್ದ 24 ಗಂಟೆಗಳ ರಾಜ್ಯವ್ಯಾಪಿ ಹೋಟೆಲ್ ಬಂದ್ ಮುಷ್ಕರ ಕಾಸರಗೋಡು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು ಜಿಲ್ಲೆಯಾದ್ಯಂತ ಹೋಟೆಲ್, ಬೇಕರಿ ಹಾಗೂ ಗೂಡಂಗಡಿಗಳು ಮುಚ್ಚಿದ್ದವು. ಪ್ರತಿಭಟನೆಯ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ನಡೆಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮುಷ್ಕರಕ್ಕೆ ಚಾಲನೆ ನೀಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ…