ಉಡುಪಿಯಲ್ಲಿ ಕಾಡುಬೆಕ್ಕಿನ ರಕ್ಷಣೆ – ಅರಣ್ಯ ಇಲಾಖೆಗೆ ಹಸ್ತಾಂತರ

ಉಡುಪಿ: ನಗರದ ಕವಿ ಮುದಣ್ಣ ಮಾರ್ಗದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಡುಬೆಕ್ಕು ಅಸಹಾಯಕ ಸ್ಥಿತಿಯನ್ನು ಎದುರಿಸುತಿತ್ತು. ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳಕ್ಕೆ ಹೋಗಿ ನಗರ ವಲಯದಲ್ಲಿ ಬದುಕಲು ಅಸಹಾಯಕತೆ ಎದುರಿಸುತ್ತಿದ್ದ ಕಾಡುಬೆಕ್ಕನ್ನು ವಶಕ್ಕೆ ಪಡೆದರು. ಬಳಿಕ ಆಹಾರ ಉಪಚಾರ ನೆಡೆಸಿ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ದೇವರಾಜ್ ಪಾಣ ಅವರಿಗೆ ಹಸ್ತಾಂತರಿಸಿದ್ದಾರೆ. ಇಲಾಖೆಯಿಂದ ಅರಣ್ಯ ವಲಯಕ್ಕೆ ಬಿಡುಗಡೆ ಮಾಡಲಾಗಿದೆ.

Read More

ಮಕ್ಕಳೊಂದಿಗೆ ಪ್ರಯಾಣಿಸಿದ ಮಹಿಳೆಗೆ ಸಂಕಷ್ಟ – ಬಸ್ ಸಿಬ್ಬಂದಿ ವಿರುದ್ಧ ದೂರು

ಮಂಗಳೂರು:ಬಸ್ ಪ್ರಯಾಣದ ವೇಳೆ ತಮಗೆ ಸಂಭವಿಸಿದ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದಾರೆ. ಕಾರ್ಕಳ ಮೂಲದ ರಮಿತಾ ಸೂರ್ಯವಂಶಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು, ತಾವು ಎದುರಿಸಿದ ತೊಂದರೆಗಳನ್ನು ವಿವರಿಸಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ಬೆಂಗಳೂರುದಿಂದ ಪುತ್ತೂರಿಗೆ ಪ್ರಯಾಣಿಸಲು ಖಾಸಗಿ ಬಸ್‌ನ್ನು ಬುಕ್ ಮಾಡಿದ್ದರು. ಪ್ರಯಾಣದ ದಿನ ಸಂಜೆ, ತಾವು ಹತ್ತಬೇಕಿದ್ದ ಬಸ್ ಕೆಟ್ಟು ಹೋಗಿದೆ ಎಂದು ಕರೆ ಬಂದಿದ್ದು, ಮಜೇಸ್ಟಿಕ್‌ನಿಂದ ಮತ್ತೊಂದು…

Read More

ಕರಾವಳಿಯಲ್ಲಿ ಮೇ 6ರಿಂದ ಗುಡುಗು-ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು :ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ…

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ದಂಡು

ಪುತ್ತೂರು: ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅವರು ಮಾಧ್ಯಮದ ಜೊತೆ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲೇ ಬಿಜೆಪಿಯನ್ನು ಬೆಳೆಸಿದರೆ, ಯಡಿಯೂರಪ್ಪ ಅವರು ದಕ್ಷಿಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕರ್ನಾಟಕದಿಂದ ಹೆಬ್ಬಾಗಿಲು ತೆರದ ಒಬ್ಬ ಧೀಮಂತ ವ್ಯಕ್ತಿ.ರೈತಾಪಿ ವರ್ಗಕ್ಕೆ ಸ್ಪಂಧಿಸಿ ಎಲ್ಲಾ ವರ್ಗದ ನಾಯಕರಾಗಿ ನಾಲ್ಕು ಬಾರಿ…

Read More

ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಪೂರಕವಾಗಿದೆ: ಬಾಲಕೃಷ್ಣ ಶೆಟ್ಟಿ ಕಾಟುಕುಕ್ಕೆ

ಕುಂಬಳೆ: ಸೀನಿಯರ್ ಟೀಚರ್ಸ್ ಆಯೋಜಿಸಿದ ಕ್ರಿಕೆಟ್ ಸೀನಿಯರ್ ಟೀಚರ್ಸ್ ಪ್ರೀಮಿಯರ್ ಲೀಗ್ ಪಂದ್ಯಾಟ ಇತ್ತೀಚೆಗೆ ಕುಂಬಳೆ ಶೇಡಿಕಾವು ಮೈದಾನದಲ್ಲಿ ಜರುಗಿತು. ನಿವೃತ್ತ ದೈಹಿಕ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಕಾಟುಕುಕ್ಕೆ ಕ್ರೀಡಾ ಕೂಟ ಉದ್ವಾಟಿಸಿ ಮಾತನಾಡಿ ‘ದೈಹಿಕ ಆರೋಗ್ಯದ ಕ್ಷಮತೆಯನ್ನು ಹೆಚ್ಚಿಸುವ ಈ ಅಧ್ಯಾಪಕರ ಪಂದ್ಯಾಟವು ಪ್ರಶಂಸನೀಯವಾಗಿದೆ. ಕ್ರಿಯಾತ್ಮಕ ಕಲಿಕೆಯ ಜೊತೆ ಜೊತೆಗೆ ಮಕ್ಕಳ ಜೊತೆ ಬೆರೆಯುವ ಅಧ್ಯಾಪಕರೆಲ್ಲರು ಒಂದು ಕಡೆ ಒಟ್ಟು ಸೇರಿ ಕ್ರೀಡೆಯಲ್ಲಿ ಭಾಗವಹಿಸುವುದು ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೂ ಇದು ಪೂರಕವಾಗಿದೆ’ ಎಂದು ನುಡಿದರು….

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಕಾರು ಚರಂಡಿಗೆ

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಮೇ.5 ರಂದು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ. ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಲಕ್ಷಣ್ ಗೌಡ ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.

Read More

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ

ವಿಟ್ಲ: ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ…

Read More

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ

ವಿಟ್ಲ: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ. ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ…

Read More

ಟಿ. ವಿಮಲ ವಿ. ಪೈ ಮೆಮೋರಿಯಲ್ ಎಸ್.ಎ.ಟಿ ಶಾಲಾ ಶತಮಾನೋತ್ಸವ ಕಟ್ಟಡ ಲೋಕಾರ್ಪಣೆ

ಮಂಜೇಶ್ವರ/ಕಾಸರಗೋಡು: ಶ್ರೀಮತ್ ಅನಂತೆಶ್ವರ ದೇವಳದ ಶಾಲೆಗಳ ವತಿಯಿಂದ ಮಂಜೇಶ್ವರದಲ್ಲಿ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಮೆಮೋರಿಯಲ್ ಎಸ್.ಎ.ಟಿ ಶಾಲೆಯ ಶತಮಾನೋತ್ಸವ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ನೆರವೇರಿತು. ಶಾಲೆಯ ಹಳೆ ವಿದ್ಯಾರ್ಥಿಯೂ ಟಿ . ವಿ . ಮೋಹನ್ ದಾಸ್ ಪೈ ಅವರ ತಾಯಿಯವಾರದ ಟಿ. ವಿಮಲ ವಿ. ಪೈ ಅವರ ಸವಿನೆನಪಿನಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡವನ್ನು ಶಿಕ್ಷಣಪ್ರೇಮಿ ಟಿ . ವಿ ….

Read More

ಮಂಜೇಶ್ವರದಲ್ಲಿ ಎಲ್‌ಡಿಎಫ್–ಯುಡಿಎಫ್ ರಹಸ್ಯ ಒಪ್ಪಂದ ಆರೋಪ: ಕೆ. ಸುರೇಂದ್ರನ್ ಟೀಕೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಪರಸ್ಪರ ಸಹಾಯ ಮಾಡಿಕೊಂಡಿವೆ ಎಂದು ಕೆ. ಸುರೇಂದ್ರನ್ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು ಕ್ಷೇತ್ರದಲ್ಲಿ ಎಲ್‌ಡಿಎಫ್ ಪಡೆದ ಮತಗಳಲ್ಲಿ ಭಾರಿ ಕುಸಿತ ಕಂಡಿದೆ. ಸುಮಾರು 20,000ಕ್ಕೂ ಹೆಚ್ಚು ಮತಗಳು ಕಳೆದ ಬಾರಿಗಿಂತ ಕಡಿಮೆಯಾಗಿದ್ದು, ಇದು ಯುಡಿಎಫ್‌ಗೆ ಲಾಭ ಮಾಡಿಕೊಡುವ ಉದ್ದೇಶಪೂರ್ವಕ ತಂತ್ರವಾಗಿದೆ ಎಂದು ಅವರು ಟೀಕಿಸಿದರು. ​ ಮಂಡಲದಲ್ಲಿ ವ್ಯವಸ್ಥಿತವಾಗಿ ಸಾಮುದಾಯಿಕ ಏಕೀಕರಣವನ್ನು ಸೃಷ್ಟಿಸಲಾಗಿದೆ. ಮತಗಳನ್ನು ಕ್ರೋಢೀಕರಿಸಲು ಯೋಜಿತವಾಗಿ ಈ ಪ್ರಯತ್ನ…

Read More
error: Content is protected !!