ಮಂಜೇಶ್ವರದಲ್ಲಿ ಯುಡಿಎಫ್ ಭರ್ಜರಿ ಗೆಲುವು: ಎ.ಕೆ.ಎಂ ಅಶ್ರಫ್ ವಿಜಯೋತ್ಸವ ಅದ್ದೂರಿ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭೂತಪೂರ್ವ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಎ.ಕೆ.ಎಂ ಅಶ್ರಫ್ ಅವರ ವಿಜಯೋತ್ಸವವು ಉಪ್ಪಳದಿಂದ ತೂಮಿನಾಡುವಿನವರೆಗೆ ಅತ್ಯಂತ ಅದ್ದೂರಿಯಾಗಿ ನಡೆಯಿತು.ಕ್ಷೇತ್ರದ ಮಣ್ಣಿನಲ್ಲಿ ಬಿಜೆಪಿಗೆ ಸ್ಥಾನವಿಲ್ಲ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಸತತ ಪರಿಶ್ರಮ ಮತ್ತು ಜನರ ಬೆಂಬಲದೊಂದಿಗೆ ಗೆಲುವು ಸಾಧಿಸಿರುವ ಎ.ಕೆ.ಎಂ ಅಶ್ರಫ್ ಅವರು ಈ ಬಾರಿ ಮಂತ್ರಿ ಸ್ಥಾನವನ್ನು ಅಲಂಕರಿಸಲು ಎಲ್ಲಾ…