ವಿಟ್ಲ: ಅಭಿವೃದ್ಧಿ ಶುಲ್ಕ ಜಾರಿ ವಿರುದ್ಧ ಸ್ಪಷ್ಟ ನಿರ್ಣಯ: ನೆಲದಲ್ಲೇ ಧರಣಿ ಕುಳಿತ ಸದಸ್ಯರು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ ವಿಧಿಸಲು ಸುತ್ತೋಲೆ ಬಂದಿದ್ದು, ಇದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸ ಬಾರದು, ಬಡಜನರ ಮೇಲೆ ತುಂಬಲಾರದ ಹೊರೆಯಾಗಿರುವ, ಅಭಿವೃದ್ಧಿ ಶುಲ್ಕ ಜಾರಿಗೊಳಿಸುವ ಸ್ಪಷ್ಟ ನಿರ್ಣಯ ತಿಳಿಸದೇ ಸಾಮಾನ್ಯ ಸಭೆ ನಡೆಸ ಬಾರದೆಂದು ಪಟ್ಟು ಹಿಡಿದ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾಂಗಣದ ನೆಲದಲ್ಲಿಯೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು…