ಬಂಟ್ವಾಳದಲ್ಲಿ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ವಿರೋಧಿಸಿ ಹಠಾತ್ ಪ್ರತಿಭಟನೆ

ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಹಠಾತ್ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ ಘಟನೆ ಫೆ. 24 ರಂದು ಮಂಗಳವಾರ ರಾತ್ರಿ ನಡೆದಿದೆ.ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ನಡೆಯುತ್ತಿರುವ ಕಪ್ಪು‌ಕಲ್ಲಿನ ಗಣಿಗಾರಿಕೆಯಲ್ಲಿ‌ ಅಕ್ರಮ ಸ್ಪೋಟಕ ಉಪಯೋಗಿಸುವ ಬಗ್ಗೆ ಹಾಗೂ ಘನ ವಾಹನಗಳ ಸಂಚಾರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವಾಗುತ್ತಿರುವ ಬಗ್ಗೆ ಆರೋಪಿಸಿ ಕೋರೆಗೆ ಬರುವ ವಾಹನಗಳನ್ನು ತಡೆದು ಹೊರಂಗಳ ಗ್ರಾಮಸ್ಥರು ರಸ್ತೆ ಮದ್ಯೆ ಪ್ರತಿಭಟಿಸಿದ್ದಾರೆ. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ಕೃಷಿ…

Read More

ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆ

ಮಂಗಳೂರು:ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಇರುವುದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ…

Read More

ಮಂಜೇಶ್ವರ :ಮತ್ತೆ ಬೆಳಗಲಿವೆ ಬೀದಿ ದೀಪಗಳು; ನಿಷ್ಕ್ರಿಯವಾಗಿದ್ದ ಹೈಮಾಸ್ಟ್ ಲೈಟ್‌ಗಳಿಗೆ ಮರುಜೀವ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಹೈಮಾಸ್ಟ್ ಮತ್ತು ಮಿನಿ ಮಾಸ್ಕ್ ದೀಪಗಳ ನವೀಕರಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ನಿಧಿಯಿಂದ ಸ್ಥಾಪಿಸಲ್ಪಟ್ಟಿದ್ದ ಈ ದೀಪಗಳು ಸರಿಯಾದ ನಿರ್ವಹಣೆಯಿಲ್ಲದೆ ಕೇವಲ ‘ಪ್ರದರ್ಶನದ ವಸ್ತು’ಗಳಂತಾಗಿದ್ದವು. ಈಗ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾದ ಬಶೀರ್ ಕನಿಲ ಅವರ ವಿಶೇಷ ಆಸಕ್ತಿಯ ಫಲವಾಗಿ ಈ ಸಮಸ್ಯೆಗಳಿಗೆ ಮುಕ್ತಿ ಸಿಗುವ ಲಕ್ಷಣ ಕಾಣಿಸುತ್ತಿದೆ. ​’ಊಟಕ್ಕಿಲ್ಲದ ಉಪ್ಪಿನಕಾಯಿ’ಯಂತಾಗಿದ್ದ ದೀಪಗಳು​ಪಂಚಾಯತ್ ವ್ಯಾಪ್ತಿಯಲ್ಲಿ ಹೈಮಾಸ್ಟ್ ಹಾಗೂ ಮಿನಿ ಮಾಸ್ಕ್ ಸೇರಿ…

Read More

ಫೆ.28ಕ್ಕೆ ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ.ಕಂಬಳ ಇತಿಹಾಸದಲ್ಲಿ ಅತೀ ಉದ್ದದ ಕರೆ ನಿರ್ಮಾಣ

ಉಡುಪಿ: ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು. ಎರ್ಮಾಳು ರಾಮ್ ದೇವ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳ ಇತಿಹಾಸದಲ್ಲಿ ಅತೀ ಉದ್ದ (ಸುಮಾರು 151 ಮೀ.)ದ ಕರೆ ನಿರ್ಮಾಣ ಮಾಡಲಾಗಿದೆ. ತೀರ್ಪುಗಾರರ ಕೊಠಡಿ, ಎರಡು ನೀರಿನ…

Read More

ಹಿಂದೂ ಸಮಾಜೋತ್ಸವ ಬೈಕ್ ರ್ಯಾಲಿಗೆ ತಡೆ ಕೋರಿ ಸಿಪಿಐಎಂ ಮನವಿ.ಸಾಮಾಜಿಕ ಸಾಮರಸ್ಯ ಭಂಗದ ಆತಂಕ; ಜಿಲ್ಲಾ ಪೊಲೀಸ್ ವರಿಷ್ಟರಿಗೆ ಅರ್ಜಿ ಸಲ್ಲಿಕೆ

ಕಾಸರಗೋಡು: ವಿದ್ಯಾನಗರದಲ್ಲಿ ಮಾ. 1ರಂದು ಆಯೋಜಿಸಲಾದ ಹಿಂದೂ ಸಮಾಜೋತ್ಸವದಂಗವಾದ ಬೈಕ್ Rally ಗೆ ಅನುಮತಿ ನಿಷೇಧಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾಸರಗೋಡು ಏರಿಯಾ ಸಮಿತಿ ಜಿಲ್ಲಾ ಪೊಲೀಸ್ ವರಿಷ್ಟರಿಗೆ ಮನವಿ ಸಲ್ಲಿಸಿದೆ. ಅನ್ಯಮತೀಯರು ಮತ್ತು ಅನ್ಯ ರಾಜಕೀಯ ಬೆಂಬಲಿಗರ ಬಾಹುಳ್ಯ ಉಳ್ಳ ಪ್ರದೇಶದಲ್ಲಿ ಬೈಕ್ ಮೆರವಣಿಗೆ ನಡೆಸಿ, ಸಂಘರ್ಷ ಸೃಷ್ಟಿಸಿ ನಾಡಿನ ಸಾಮಾಜಿಕ ಸಾಮರಸ್ಯತೆಯ ಐಕ್ಯತೆಯನ್ನು ಶಿಥಿಲಗೊಳಿಸಲು ಗೂಢ ಸಂಚಿನೊಂದಿಗೆ ಬೈಕ್ ಮೆರವಣಿಗೆ ಏರ್ಪಡಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟರಿಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ. ಹಿಂದೂ ಸಮಾಜೋತ್ಸವದಂಗವಾಗಿ ಏರ್ಪಡಿಸಿದ…

Read More

‘ಕೇರಳಾ ಸ್ಟೋರಿ–2’ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ: ಕೇರಳ ಹೈಕೋರ್ಟ್ ಆದೇಶ

ಎರ್ನಾಕುಳಂ: ಕೇರಳವನ್ನು ಕಪೋಲಕಲ್ಪಿತ ಪೂರ್ವಾಗ್ರಹ ಪೀಡಿತವಾಗಿ ಚಿತ್ರೀಕರಿಸಿದ ವಿವಾದ ಸಿನಿಮಾ ‘ಕೇರಳಾ ಸ್ಟೋರಿ-2’ ಪ್ರದರ್ಶನವನ್ನು ವಿಚಾರಣೆ ಮತ್ತು ವೀಕ್ಷಣೆ ನಡೆಯುವ ತನಕ ಕೇರಳ ಉಚ್ಛ ನ್ಯಾಯಾಲಯ ಪ್ರದರ್ಶನ ಆಗದಂತೆ ನಿಷೇಧಿಸಿದೆ.ಪ್ರಸ್ತುತ ಸಿನೆಮಾದ ಆಶಯ ಮತ್ತು ಕಥೆ ಕೇರಳದ ಜಾತ್ಯಾತೀತ ಸಾಮರಸ್ಯ ಬದುಕಿನ ಸಹಜ ವಾತಾವರಣದ ನೖಜತೆಗಿಂತ ತುಂಬಾ ಭಿನ್ನವಾಗಿ, ಕೇರಳ ಕಾಪಾಡಿದ ಮಾನವೀಕತೆಯನ್ನೇ ಅಣಕಿಸುವ ಮತ್ತು ಕೇರಳ ಕಾಪಾಡಿದ ಪ್ರಜಾತಂತ್ರ ಮೌಲ್ಯಗಳನ್ನು ಬಾಧಿಸುವ ಮಟ್ಟದಲ್ಲಿದೆ ಎಂದು ಆರೋಪಿಸಿ ಸಿನಿಮ ಪ್ರದರ್ಶನ ತಡೆಯಬೇಕೆಂಬ ನಾಗರಿಕ ಹಿತಾಸಕ್ತಿಯಂತೆ ಸಲ್ಲಿಸಲ್ಪಟ್ಟಿದ ನಾಗರಿಕ…

Read More

ಕಣ್ಣೂರು ರೈಲು ನಿಲ್ದಾಣದಲ್ಲಿ ಆರೋಗ್ಯ ಸಚಿವೆ ಮೇಲೆ ದಾಳಿ: ಕೊರಳಿಗೆ ಗಂಭೀರ ಗಾಯ, ಎಂಆರ್‌ಐ ಸಲಹೆ

ಕಾಸರಗೋಡು: ಕಣ್ಣೂರು ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಕೆ. ಎಸ್. ಯು ನೇತೃತ್ವದಲ್ಲಿ ಆರೋಗ್ಯ ಸಚಿವೆ ವಿರುದ್ಧ ಕರಿಪತಾಕೆ ಪ್ರದರ್ಶನದ ಪ್ರತಿಭಟನೆಯ ಮರೆಯಲ್ಲಿ ಸಚಿವೆಯ ಮೇಲೆ ನಡೆದ ಆಕ್ರಮಣ ಕೇರಳಾದ್ಯಂತ ವ್ಯಾಪಕ ಪ್ರತಿಭಟನೆಗೆ ಗುರಿಯಾಗಿದೆ. ರೈಲು ನಿಲ್ದಾಣದಲ್ಲಿ ರೈಲನ್ನೇರಲು ಹೋಗುವ ಸಂದರ್ಭ ಸಚಿವೆಯನ್ನು ಆಕ್ರಮಿಸಿ ಗಾಯಗೊಳಿಸಲಾಗಿದ್ದು, ಸಚಿವೆಗೆ ಗಂಭೀರ ಏಟುಗಳಾಗಿವೆ. ಆಕ್ರಮಣದ ಬೆನ್ನಲ್ಲೇ ಕಣ್ಣೂರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವೆ ಯ ಆರೋಗ್ಯ ಸ್ಥಿತಿಯ ಕುರಿತು ಮೆಡಿಕಲ್ ಬುಲೆಟಿನ್ ಪ್ರಕಟಿಸಲಾಗಿದ್ದು, ಸಚಿವೆಯ ಕೊರಳಿಗೆ…

Read More

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಕಾರ್ಮಿಕರ ದೀರ್ಘಕಾಲದ ಸಮಸ್ಯೆಗಳು ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾಡಲಾಯಿತು.ಪ್ರತಿಭಟನೆ ಮತ್ತು ಮನವಿಯ ನೇತೃತ್ವವನ್ನು ಬಿಎಮ್ಎಸ್ ಜಿಲ್ಲಾ ಅಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ವಹಿಸಿದ್ದರು. ಪ್ರತಿಭಟನೆಯಲ್ಲಿ…

Read More

ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊಗೆ ಯಕ್ಷಮಂಗಳ ಪ್ರಶಸ್ತಿ, ‘ಬಲಿಪ ಮಾರ್ಗ’ ಹಾಗೂ ‘ಅಗರಿ ಮಾರ್ಗ’ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರ ‘ಬಲಿಪ ಮಾರ್ಗ ಹಾಗೂ ಅಗರಿಮಾರ್ಗ’ ಕೃತಿಯು ಆಯ್ಕೆಯಾಗಿದೆ.ಯಕ್ಷಮಂಗಳ ಪ್ರಶಸ್ತಿಯು 25,000 ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ … !

ಮಂಗಳೂರು:ಪ್ರಧಾನಿ ಮೋದಿ ಅಮೆರಿಕಕ್ಕೆ ಶರಣಾಗಿದ್ದಾರೆ (Epstein Files) ಎಂದು ಆರೋಪಿಸಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆಯನ್ನು ನಡೆಸಿದರು . ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವವಹಿಸಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ರಾಜ್ಯ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್, ಡೆನ್ನಿಸ್…

Read More
error: Content is protected !!