ಬಾಯಾರು ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಬೃಹತ್ ಪ್ರತಿಭಟನೆ
ಮಂಜೇಶ್ವರ : ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಪೈವಳಿಕೆ ಪಂಚಾಯತ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮಾರ್ಚ್ ಮತ್ತು ಧರಣಿ ನಡೆಸಿತು.ನೂತನ ಕಟ್ಟಡ ಚಿಕಿತ್ಸಾ ಸೌಲಭ್ಯಗಳೊಂದಿಗೆ ಆಸ್ಪತ್ರೆ ಕೂಡಲೇ ಕಾರ್ಯಾಚರಿಸಬೇಕು,ಅಗತ್ಯ ವೈದ್ಯರ ಸೇವೆ ಲಭ್ಯವಾಗಬೇಕು,ಅಗತ್ಯದ ಔಷಧಗಳ ಲಭ್ಯತೆ ಖಾತರಿಪಡಿಸಬೇಕು ಮತ್ತು ಸಂಧ್ಯಾ ಸಮಯದಲ್ಲಿ ಹೊರ ರೋಗಿಗಳ ವಿಭಾಗ ಕಾರ್ಯಾಚರಿಸಬೇಕು.ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಗ್ರಾಮಾಧಿಕಾರಿ ಕಚೇರಿ ಪರಿಸರದಿಂದ ಆರಂಭಗೊಂಡ ಮಾರ್ಚ್ ಕುಟುಂಬ ಆರೋಗ್ಯ ಕೇಂದ್ರ ಪರಿಸರದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಪ್ರತಿಭಟನಾ…