ಬಹು ನಿರೀಕ್ಷಿತ “ನಾನ್ ವೆಜ್“ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ
ಮಂಗಳೂರು:ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ.ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ ” ನಾನ್ ವೆಜ್” ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ದೀಪ ಬೆಳಗಿಸಿ ಸಿನಿಮಾಕ್ಕೆ ಶುಭ ಹಾರೈಸಿದ ಹಿರಿಯ ವಕೀಲ ಮಯೂರಕೀರ್ತಿ ಅವರು, “ನನಗೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವುದು ಒಬ್ಬ ನೈಜ ತುಳು ಸಿನಿಮಾ ಪ್ರೇಕ್ಷಕನಿಗೆ ಸಂದ ದೊಡ್ಡ ಗೌರವ. ನಾನು ಬಹುತೇಕ ಎಲ್ಲ ತುಳು ಸಿನಿಮಾಗಳನ್ನು ನೋಡುತ್ತೇನೆ. ಈ ಹಿಂದೆ “ಚಾಲಿಪೋಲಿಲು” ಅನ್ನುವ ತುಳು ಚಿತ್ರ ನಿರ್ಮಿಸಿ ದಾಖಲೆ ಬರೆದಿದ್ದ…