ಸಂತಡ್ಕ ಮಾಡದಲ್ಲಿ ಜೂನ್ 7ರಂದು ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವ
ಶ್ರೀ ಅರಸು ಸಕಲ ದೈವ ಕ್ಷೇತ್ರ ಸಂತಡ್ಕ ಮಾಡದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಭಕ್ತರ ಅಭೀಷ್ಟಾರ್ಥ ಸಿದ್ಧಿಗಾಗಿ ಹಾಗು ಭೋಜನ ಶಾಲೆಯ ಉದ್ಘಾಟನೆಯ ಅಂಗವಾಗಿ ಜೂನ್ 7ರಂದು ಅತೀ ಮಹತ್ವದ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ.ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಡಾ. ಶ್ರೀಧರ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರ ತಂತ್ರಿವರ್ಯರಾದ…