ಬದಿಯಡ್ಕ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಪತ್ತೆ
ಬದಿಯಡ್ಕ : ಇಲ್ಲಿಗೆ ಸಮೀಪದ ಪಟ್ಟಾಜೆಯಲ್ಲಿ 29 ವರ್ಷದ ರಂಜಿತ್ ಎಂಬ ಯುವಕ ಬೆಡ್ರೂಂನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಸ್ಥರು ಬೆಳಿಗ್ಗೆ ಸಂಬಂಧಿಕರ ಮನೆಗೆ ತೆರಳಿದ್ದರಿಂದ ರಂಜಿತ್ ಮನೆಯಲ್ಲಿ ಒಬ್ಬನೇ ಇದ್ದನು. ರಾತ್ರಿ 8:30ರ ಸುಮಾರಿಗೆ ಕುಟುಂಬದವರು ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಸ್ಪಂದಿಸದಿದ್ದಾಗ ಬಾಗಿಲು ಮುರಿದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಮೃತ…
