ಬದಿಯಡ್ಕ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಪತ್ತೆ

​ಬದಿಯಡ್ಕ : ಇಲ್ಲಿಗೆ ಸಮೀಪದ ಪಟ್ಟಾಜೆಯಲ್ಲಿ 29 ವರ್ಷದ ರಂಜಿತ್ ಎಂಬ ಯುವಕ ಬೆಡ್‌ರೂಂನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ​ಕುಟುಂಬಸ್ಥರು ಬೆಳಿಗ್ಗೆ ಸಂಬಂಧಿಕರ ಮನೆಗೆ ತೆರಳಿದ್ದರಿಂದ ರಂಜಿತ್ ಮನೆಯಲ್ಲಿ ಒಬ್ಬನೇ ಇದ್ದನು. ರಾತ್ರಿ 8:30ರ ಸುಮಾರಿಗೆ ಕುಟುಂಬದವರು ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಸ್ಪಂದಿಸದಿದ್ದಾಗ ಬಾಗಿಲು ಮುರಿದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ​ಮೃತ…

Read More

ಮಲಯಾಳಿಗಳಿಗೆ ಪಿಣರಾಯಿ ವಿಜಯನ್ ಅವರ ಓಣಂ ಶುಭಾಶಯ

ತಿರುವನಂತಪುರಂ: ಮಲಯಾಳಿಗಳಿಗೆ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ ಅವರು ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.“ಸಮೃದ್ಧಿ, ಸಮಾನತೆ ಮತ್ತು ಸಹೋದರತ್ವದ ಸಂದೇಶವನ್ನು ಓಣಂ ನಮಗೆ ನೀಡುತ್ತದೆ. ಜಾತಿ, ಧರ್ಮ ಮತ್ತು ರಾಜಕೀಯದ ಎಲ್ಲೆಗಳನ್ನು ಮೀರಿ ಮಲಯಾಳಿಗಳ ಮನಸ್ಸುಗಳನ್ನು ಒಂದಾಗಿಸುವ ಮಹಾನ್ ಹಬ್ಬವೇ ಓಣಂ. ಸಂಕಷ್ಟಗಳು ಮತ್ತು ಸವಾಲುಗಳನ್ನು ಎದುರಿಸಿ, ಭರವಸೆಯಿಂದ ಮುಂದೆ ಸಾಗುವ ಶಕ್ತಿಯನ್ನು ಈ ಓಣಂ ನಮಗೆ ನೀಡಲಿ” ಎಂದು ಅವರು ಆಶಿಸಿದ್ದಾರೆ. “ಎಲ್ಲರ ಜೀವನದಲ್ಲೂ ಸಂತೋಷ, ಶಾಂತಿ ಮತ್ತು ಐಶ್ವರ್ಯ ತುಂಬಿರಲಿ. ಅಶಕ್ತರು ಹಾಗೂ ಹಿಂದುಳಿದವರ…

Read More

ಮಲಯಾಳಿಗಳಿಗೆ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ಮುರ್ಮು ಅವರ ಓಣಂ ಶುಭಾಶಯ

ಮಲಯಾಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಉತ್ಸಾಹದಿಂದ ಆಚರಿಸಲಾಗುವ ಸಡಗರಭರಿತ ಹಬ್ಬವೇ ಓಣಂ ಎಂದು ತಮ್ಮ ಶುಭಾಶಯ ಸಂದೇಶದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಈ ಹಬ್ಬವು ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಅವರು ಆಶಿಸಿದ್ದಾರೆ. ಪ್ರಧಾನಿ ಮೋದಿ ಅವರು ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಓಣಂ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ಮೂಲಕ ಅವರು ಶುಭಾಶಯ ಸಂದೇಶವನ್ನು ಹಂಚಿಕೊಂಡಿದ್ದಾರೆ.ರಾಷ್ಟ್ರಪತಿ ದ್ರೌಪದಿ…

Read More

ತಿರುವೋಣಂ: ಸಮಾನತೆ, ಮಾನವೀಯತೆ ಮತ್ತು ಕೇರಳದ ಸಾಂಸ್ಕೃತಿಕ ವೈಭವದ ಹಬ್ಬ

ಕೇರಳ ಇಂದು ತಿರುವೋಣದ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಮನೆಗಳ ಅಂಗಳದಲ್ಲಿ ಅರಳಿರುವ ಪೂಕಳಂ, ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುವ ಜನರು, ಓಣಸದ್ಯದ ಸುವಾಸನೆ, ಕೈಕೊಟ್ಟಿಕಳಿಯ ಹಾಡುಗಳು, ವಲ್ಲಂಕಳಿಯ ಉತ್ಸಾಹ—ಇವೆಲ್ಲವೂ ಸೇರಿ ಕೇರಳದ ನಾಡಿನ ಹಬ್ಬಕ್ಕೆ ವಿಶಿಷ್ಟ ಮೆರುಗು ನೀಡಿವೆ. ಆದರೆ ಓಣಂ ಕೇವಲ ಸಂಭ್ರಮದ ಹಬ್ಬವಲ್ಲ; ಅದು ಸಮಾನತೆ, ಸಹೋದರತ್ವ, ಮಾನವೀಯತೆ ಮತ್ತು ಪ್ರಕೃತಿಯೊಂದಿಗೆ ಮನುಷ್ಯನ ಸಂಬಂಧವನ್ನು ನೆನಪಿಸುವ ಮಹತ್ವದ ಆಚರಣೆಯಾಗಿದೆ. ತಿರುವೋಣಂ ಓಣಂ ಹಬ್ಬದ ಪ್ರಮುಖ ದಿನ. ಮಲಯಾಳಿಗಳ ಸಾಂಸ್ಕೃತಿಕ ಬದುಕಿನಲ್ಲಿ ಇದಕ್ಕೆ ವಿಶೇಷ ಸ್ಥಾನವಿದೆ. ಪುರಾಣ ಮತ್ತು…

Read More

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 6 ವರ್ಷ ಕಠಿಣ ಜೈಲು, ₹30 ಸಾವಿರ ದಂಡ

​ ಕಾಸರಗೋಡು : ಹೊಸದುರ್ಗ ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯವು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 6 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 30,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ​ಕರ್ನಾಟಕ ಬಾಳೆಹೊಸೂರು ನಿವಾಸಿ ಹೇಲಪ್ಪ ಸುಬ್ಬಣ್ಣ ಇರೆಗಾರ (36) ಶಿಕ್ಷೆಗೊಳಗಾದ ಆರೋಪಿ. 2025ರ ಜುಲೈ 16ರಂದು ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಈ ಕುರಿತು ಬಾಲಕಿಯ ದೂರಿನ ಮೇರೆಗೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು…

Read More

ಮಂಜೇಶ್ವರ: 17 ವರ್ಷದ ವಿದ್ಯಾರ್ಥಿ ನಾಪತ್ತೆ; ಪೊಲೀಸರಿಂದ ಶೋಧ ತೀವ್ರ

​ಮಂಜೇಶ್ವರ: ಪುತ್ತಿಗೆಯ ಮುಹಿಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿ ಮೊಹಮ್ಮದ್ ಮುಸಾಮಿಲ್ ನಾಪತ್ತೆಯಾಗಿದ್ದಾರೆ. ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್‌ನ ಮೊಯ್ದಿನ್ ಅವರ ಪುತ್ರರಾದ ಈತ, ಬಾನುವಾರ ಮಧ್ಯಾಹ್ನದಿಂದ ಸಂಸ್ಥೆಯಿಂದ ಕಣ್ಮರೆಯಾಗಿದ್ದಾರೆ.​ಶಿಕ್ಷಣ ಸಂಸ್ಥೆಯ ಅಧ್ಯಾಪಕ ಅಬ್ದುಲ್ ಲತೀಫ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ತಕ್ಷಣವೇ ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಪತ್ತೆಗಾಗಿ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದು, ತನಿಖೆ ಮುಂದುವರಿದಿದೆ.

Read More

ವಿಪ್ರ ಶಕ್ತಿ ಸದಾ ಮಿನುಗುತ್ತಿರುತ್ತದೆ:” ವಿದ್ವಾನ್ ಭಾಸ್ಕರ ಭಟ್, ಪಂಜ

ಸಮಾಜದ ಒಗ್ಗೂಡುವಿಕೆಗೆ ಬ್ರಾಹ್ಮಣರು ಸದಾ ಪ್ರಯತ್ನಿಸುತ್ತಾರೆ. ಧಿಯೋ ಯೋನ ಪ್ರಚೋದಯಾತ್ ಇದು ನಮ್ಮ ಪ್ರತಿಭಾ ಶಕ್ತಿಯ ಬೀಜ ಮಂತ್ರ. ಯಾವುದೇ ಮಾನವೀಯ ಬೇಧ ಕಲ್ಪಿಸದೆ ಸರ್ವರನ್ನೂ ತಮ್ಮೊಂದಿಗೆ ಕರೆದೊಯ್ಯುವ ಶಕ್ತಿ ಬ್ರಹ್ಮತ್ವಕ್ಕಿದೆ. ನಾವು ನಮ್ಮ ಧಾರ್ಮಿಕ ವಿಧಾನ, ಆಚರಣೆಯಿಂದ ನಮ್ಮ ಬಲ ವೃದ್ಧಿಸಿಕೊಳ್ಳುತ್ತೇವೆ. ಪುರದ ಹಿತವನ್ನು ಹಾರೈಸುವವರಾಗಿ ಸರ್ವಪ್ರಿಯರಾಗುತ್ತೇವೆ. ಲೋಕ ಕಲ್ಯಾಣವನ್ನೇ ಅಸ್ತ್ರವನ್ನಾಗಿಸಿಕೊಂಡು ಬದುಕುತ್ತೇವೆ. ಇದುವೇ ಬ್ರಹ್ಮ ತೇಜೋ ಬಲಂ ಬಲಮ್ ಆಗಿರುತ್ತದೆ.” ಎಂದು ಪ್ರಖರ ಧಾರ್ಮಿಕ ಚಿಂತಕರೂ,ವಿದ್ವಾಂಸರೂ ಆದ ಪಂಜ ಭಾಸ್ಕರ ಭಟ್ ರವರು ಕೋಡಿಕಲ್…

Read More

ಲಿಫ್ಟ್‌ನಲ್ಲಿ ಸಿಲುಕಿದ ಮೂವರು; ಅಗ್ನಿಶಾಮಕ ದಳದಿಂದ ರಕ್ಷಣೆ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಅತ್ತಾವರದ ಹೋಟೆಲ್ ಇಮಾಮ್ ಪ್ಯಾರಡೈಸ್‌ನ ಲಿಫ್ಟ್‌ನಲ್ಲಿ ಮೂವರು ಸಿಲುಕಿಕೊಂಡ ಘಟನೆ ನಡೆದಿದೆ . ಆಂಧ್ರಪ್ರದೇಶದ ವಿಜಯವಾಡ ಮೂಲದ ಮೂವರು ಲಿಫ್ಟ್‌ನಲ್ಲಿ ಸುಮಾರು ಒಂದು ಗಂಟೆ ಸಿಲುಕಿಕೊಂಡಿದ್ದರು. ಲಿಫ್ಟ್‌ನಲ್ಲಿ ಸಿಲುಕಿದ್ದವರ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮೂವರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ. “ಸುಮಾರು ಒಂದು ಗಂಟೆಯಿಂದ ಲಿಫ್ಟ್‌ನಲ್ಲಿ ಸಿಲುಕಿದ್ದೆವು. ಮಾಹಿತಿ ನೀಡಿದ ಐದು ನಿಮಿಷದಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಿಸಿದರು,” ಎಂದು ಅನಂತ್ ಬಾಬು ತಿಳಿಸಿದ್ದಾರೆ.

Read More

ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳು ವಶಕ್ಕೆ

ದಿನಾಂಕ 12.08.2026 ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು…

Read More

ವಿಶ್ವ ತುಳುವೆರ್ (ರಿ) ಕೇರಳ ಘಟಕ ಉದ್ಘಾಟನಾ ಸಮಾರಂಭ

ವಿಶ್ವ ತುಳುವೆರ್ (ರಿ) ಕೇರಳ ಘಟಕ ಇದರ ಉದ್ಘಾಟನಾ ಸಮಾರಂಭ, ಪದಾಧಿಕಾರಿಗಳ ಪದಗ್ರಹಣ ಮತ್ತು ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇದರ 236ನೇ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಆಗಸ್ಟ್ 2ರಂದು ಡಾ. ವಾಣಿಶ್ರೀ ಕಾಸರಗೋಡು ಇವರ ಸ್ವಗೃಹ ಶ್ರೀಗಿರಿ ಸದನ “ಪ್ರಕೃತಿ ಆಯುರ್ವೇದ ಆಸ್ಪತ್ರೆ “ಯ ಶಿವದುರ್ಗಾ ಕಲಾ ವೇದಿಕೆಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ತುಳುವೆರ್ (ರಿ) ಮಂಗಳೂರು ಇದರ…

Read More
error: Content is protected !!