ಮಳೆಗಾಲದ ಕೃತಕ ನೆರೆಗೆ ಕಡಿವಾಣ: ಪಂಪ್ವೆಲ್, ಪಡೀಲ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ
ಮಂಗಳೂರು, ಜೂನ್ 5: ಮಳೆಗಾಲ ಆರಂಭವಾದಾಗ ಮಂಗಳೂರು ನಗರವನ್ನು ವರ್ಷಂಪ್ರತಿ ಕಾಡುವ ಕೃತಕ ನೆರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಪಂಪ್ವೆಲ್ ಜಂಕ್ಷನ್ ಹಾಗೂ ಪಡೀಲ್ ರೈಲ್ವೆ ಅಂಡರ್ಪಾಸ್ ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಉಂಟಾಗುವ ತೊಂದರೆ ನಿವಾರಣೆಗೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಪಂಪ್ವೆಲ್ನಲ್ಲಿ ಭಾರೀ ಮಳೆಯ ಸಂದರ್ಭ ಫ್ಲೈಓವರ್ ಕೆಳಭಾಗದ ರಸ್ತೆ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವುದು ಸಾಮಾನ್ಯವಾಗಿದೆ. ಹಲವು ಗಂಟೆಗಳ…