ಮಳೆಗಾಲದ ಕೃತಕ ನೆರೆಗೆ ಕಡಿವಾಣ: ಪಂಪ್‌ವೆಲ್, ಪಡೀಲ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ

ಮಂಗಳೂರು, ಜೂನ್ 5: ಮಳೆಗಾಲ ಆರಂಭವಾದಾಗ ಮಂಗಳೂರು ನಗರವನ್ನು ವರ್ಷಂಪ್ರತಿ ಕಾಡುವ ಕೃತಕ ನೆರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಪಂಪ್‌ವೆಲ್ ಜಂಕ್ಷನ್ ಹಾಗೂ ಪಡೀಲ್ ರೈಲ್ವೆ ಅಂಡರ್‌ಪಾಸ್ ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಉಂಟಾಗುವ ತೊಂದರೆ ನಿವಾರಣೆಗೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಪಂಪ್‌ವೆಲ್‌ನಲ್ಲಿ ಭಾರೀ ಮಳೆಯ ಸಂದರ್ಭ ಫ್ಲೈಓವರ್ ಕೆಳಭಾಗದ ರಸ್ತೆ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವುದು ಸಾಮಾನ್ಯವಾಗಿದೆ. ಹಲವು ಗಂಟೆಗಳ…

Read More

ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಮರಕಡ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಮಂಗಳೂರು, ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ಮತ್ತು ದ.ಕ.ಜಿ.ಪಂ.ಸ. ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ, ಕುಂಜತ್ತಬೈಲ್ ಇಲ್ಲಿ 2026-27 ನೇ ಸಾಲಿನ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಮತ್ತು ನೂತನವಾಗಿ ಆರಂಭಿಸಿದ ಎಲ್.ಕೆ.ಜಿ ತರಗತಿಯ ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮಂಗಳೂರು ಉತ್ತರ…

Read More

ಅಡ್ಯಾರ್ ಗಾರ್ಡನ್‌ನಲ್ಲಿ ‘ಪಟ್ಲ ಸಂಭ್ರಮ-2026’ ವೈಭವ; ವಿದ್ಯಾರ್ಥಿವೇತನ, ಸನ್ಮಾನ ಸಮಾರಂಭಕ್ಕೆ ಮೆರುಗು

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಪಟ್ಲ ಸಂಭ್ರಮ-2026’, ಸನ್ಮಾನ ಸಮಾರಂಭ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಉದ್ಘಾಟಿಸಿ ಮಾತನಾಡಿ, ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮೂರು ಸಾವಿರ ರೂ ವಿದ್ಯಾರ್ಥಿವೇತನ, ಕಲಾವಿದರಿಗಾಗಿ ವಿಮಾ ಯೋಜನೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಯಕ್ಷಧ್ರುವ ಫೌಂಡೇಶನ್ ಯಶಸ್ವಿಯಾಗಿ ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. “ದಾನ ಮಾಡುವ ಸಂಕಲ್ಪ ಇದ್ದರೆ ದೇವರ…

Read More

​ಮಂಜೇಶ್ವರದಲ್ಲಿ ಸಡಗರದಿಂದ ನೆರವೇರಿದ ಬಕ್ರೀದ್: ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರು

​ಮಂಜೇಶ್ವರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಪವಿತ್ರ ‘ಈದುಲ್ ಅಝಾ’ (ಬಕ್ರೀದ್) ಹಬ್ಬವನ್ನು ಮಂಜೇಶ್ವರ ತಾಲೂಕಿನಾದ್ಯಂತ ಗುರುವಾರ ಅತ್ಯಂತ ಭಕ್ತಿ, ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.​ಬೆಳಿಗ್ಗೆಯಿಂದಲೇ ನವವಸ್ತ್ರಧಾರಿಗಳಾದ ಮುಸ್ಲಿಂ ಬಾಂಧವರು ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪವಿತ್ರ ಈದ್ ನಮಾಜ್ ಸಲ್ಲಿಸಿದ ಬಳಿಕ, ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಲವು ಮಸೀದಿಗಳಲ್ಲಿ ಮಹಿಳೆಯರಿಗೂ ಪ್ರಾರ್ಥನೆ ಸಲ್ಲಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ​ಮಂಜೇಶ್ವರ ತಾಲೂಕಿನ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪ್ರಾರ್ಥನೆಗಳು…

Read More

ಸಂತಡ್ಕ ಮಾಡದಲ್ಲಿ ಜೂನ್ 7ರಂದು ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವ

ಶ್ರೀ ಅರಸು ಸಕಲ ದೈವ ಕ್ಷೇತ್ರ ಸಂತಡ್ಕ ಮಾಡದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಭಕ್ತರ ಅಭೀಷ್ಟಾರ್ಥ ಸಿದ್ಧಿಗಾಗಿ ಹಾಗು ಭೋಜನ ಶಾಲೆಯ ಉದ್ಘಾಟನೆಯ ಅಂಗವಾಗಿ ಜೂನ್ 7ರಂದು ಅತೀ ಮಹತ್ವದ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ.ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಡಾ. ಶ್ರೀಧರ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರ ತಂತ್ರಿವರ್ಯರಾದ…

Read More

2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ಮಂಗಳೂರು: 2021 ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಜು @ ವಿಜಯ್, ಬಂಧಿತ ಆರೋಪಿ. ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ನ್ಯಾಯಾಲಯದಿಂದ NBW ವಾರಂಟ್ ಜಾರಿಯಾಗಿತ್ತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಪ್ರಕರಣಗಳು, ದರೋಡೆಗೆ ಸಂಚು ಪ್ರಕರಣಗಳು ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2021…

Read More

ವಕ್ವಾಡಿಯಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್‌ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ. ವಕ್ವಾಡಿಯ ಕವಿತಾ ಕುಲಾಲ್ ನೀಡಿದ ಮಾಹಿತಿಯ ಆಧಾರದಲ್ಲಿ ಆದಿಮ ಕಲಾ ಟ್ರಸ್ಟ್ ವತಿಯಿಂದ ನಡೆಸಿದ ಪುರಾತತ್ತ್ವ ಅನ್ವೇಷಣೆಯ ವೇಳೆ ಈ ವೀರಗಲ್ಲು ಪತ್ತೆಯಾಗಿದೆ. ಸುಮಾರು ನಾಲ್ಕು ಅಡಿ ಎತ್ತರದ…

Read More

ಬಂದಿಯೊಡ್–ಇಚ್ಚಿಲಂಗೋಡ್ ರಸ್ತೆ ದುಸ್ಥಿತಿ: ಸ್ಥಳೀಯರು ಸಂಕಷ್ಟದಲ್ಲಿ

ಮಂಜೇಶ್ವರ: ಬಂದಿಯೊಡ್–ಇಚ್ಚಿಲಂಗೋಡ್ ಸಂಪರ್ಕ ರಸ್ತೆ ಕಳೆದ ಮೂರು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.ರಸ್ತೆ ಹಾಳಾಗಿರುವುದರಿಂದ ಆಟೋ ರಿಕ್ಷಾಗಳು ಈ ಭಾಗಕ್ಕೆ ಬರುವುದಕ್ಕೂ ಹಿಂದೇಟು ಹಾಕುತ್ತಿವೆ. ಆಟೋ ಬಾಡಿಗೆಗೆ ಕರೆ ಮಾಡಿದರೂ ಚಾಲಕರು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಚಾಲಕರ ತಪ್ಪಲ್ಲ, ರಸ್ತೆ ದುಸ್ಥಿತಿಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರದೇಶದಲ್ಲಿ ದೇವಸ್ಥಾನ ಹಾಗೂ ಮಸೀದಿ ಇರುವುದರಿಂದ ಜನರ ಸಂಚಾರ ಹೆಚ್ಚಾಗಿದೆ. ವಿಶೇಷವಾಗಿ ಇಚ್ಚಿಲಂಗೋಡ್ ಜುಮಾ ಮಸೀದಿಗೆ ಪ್ರತಿದಿನ…

Read More

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು…

Read More

ಕಡಬದಲ್ಲಿ ತ್ಯಾಜ್ಯ ಅವ್ಯವಸ್ಥೆ ವಿರುದ್ಧ ಜನರ ಆಕ್ರೋಶ!

ಕಡಬ: ಕೋಡಿಂಬಾಳ ಗ್ರಾಮದ ಕಕ್ಕೆತ್ತಿಮಾರ್ ನಲ್ಲಿರುವ ಕಡಬ ಪಟ್ಟಣ ಪಂಚಾಯತ್‌ನ ಘನ ತ್ಯಾಜ್ಯ ವಿಲೇವಾರಿ ಘಟಕದ ಅವ್ಯವಸ್ಥೆಯ ವಿರುದ್ಧ ಆಕ್ರೋಶಗೊಂಡಿರುವ ಸ್ಥಳೀಯ ಜನರು ಕೂಡಲೇ ಘಟಕದಲ್ಲಿ ರಾಶಿ ಬಿದ್ದು ಕೊಳೆತು ನಾರುತ್ತಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ತ್ಯಾಜ್ಯ ಸಾಗಾಟ ವಾಹನವನ್ನು ತಡೆದು ಪ್ರತಿಭಟಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಕೊಳೆತು ನಾರುತ್ತಿರುವ ತ್ಯಾಜ್ಯ ಘಟಕ ಪ್ರತಿಭಟನೆಯ ವೇಳೆ ಮಾತನಾಡಿದ ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ ಪಾಲಪ್ಪೆ ಅವರು ಪಟ್ಟಣ ಪಂಚಾಯತ್‌ನ ಅಸಮರ್ಪಕ…

Read More
error: Content is protected !!