ಮಂಜೇಶ್ವರದಲ್ಲಿ ಸಡಗರದಿಂದ ನೆರವೇರಿದ ಬಕ್ರೀದ್: ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರು
ಮಂಜೇಶ್ವರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಪವಿತ್ರ ‘ಈದುಲ್ ಅಝಾ’ (ಬಕ್ರೀದ್) ಹಬ್ಬವನ್ನು ಮಂಜೇಶ್ವರ ತಾಲೂಕಿನಾದ್ಯಂತ ಗುರುವಾರ ಅತ್ಯಂತ ಭಕ್ತಿ, ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.ಬೆಳಿಗ್ಗೆಯಿಂದಲೇ ನವವಸ್ತ್ರಧಾರಿಗಳಾದ ಮುಸ್ಲಿಂ ಬಾಂಧವರು ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪವಿತ್ರ ಈದ್ ನಮಾಜ್ ಸಲ್ಲಿಸಿದ ಬಳಿಕ, ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಲವು ಮಸೀದಿಗಳಲ್ಲಿ ಮಹಿಳೆಯರಿಗೂ ಪ್ರಾರ್ಥನೆ ಸಲ್ಲಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮಂಜೇಶ್ವರ ತಾಲೂಕಿನ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪ್ರಾರ್ಥನೆಗಳು…
