ಮಂಜೇಶ್ವರದಲ್ಲಿ ಚುರುಕುಗೊಂಡ ಮತದಾನ: ಮಧ್ಯಾಹ್ನದ ಬಳಿಕ ಉತ್ತಮ ಸ್ಪಂದನೆ
ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಇಂದು ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಗಡಿ ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಮತದಾನದ ಆರಂಭಿಕ ನಾಲ್ಕು ಗಂಟೆಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ನೀರಸ ಸ್ಪಂದನೆ ಕಂಡುಬಂದಿದ್ದರೂ, ನಂತರ ಸಮಯ ಕಳೆದಂತೆ ಮತಗಟ್ಟೆಗಳತ್ತ ಮತದಾರರ ಸಂಖ್ಯೆ ಹೆಚ್ಚಳ ಕಂಡಿದೆ. ಮಧ್ಯಾಹ್ನ ವೇಳೆಗೆ ಉತ್ತಮ ಪ್ರಮಾಣದ ಮತದಾನ ದಾಖಲಾಗಿದ್ದು, ಸಂಜೆಯ ವೇಳೆಗೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ….
