ಯುವಕರ ಕಲ್ಯಾಣವೇ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಯನ್ನು ವೇಗಗೊಳಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವು ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಅಮಿತ್ ಶಾ ಎಕ್ಸ್ (X) ನಲ್ಲಿ ಬರೆದಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯ ಮೂಲಕ ಯುವಕರ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈಗೊಂಡಿರುವ ಈ ಮಹತ್ವದ ಕ್ರಮವು ಒಂದು ಮೈಲಿಗಲ್ಲಾಗಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.


