ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಬದಲಾಯಿಸಿರುವುದು ಇತಿಹಾಸ : ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬೈ : ಬಿಜೆಪಿ-ಶಿವಸೇನಾ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡು ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಬದಲಾಯಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾ, ಮಹಾರಾಷ್ಟ್ರದ ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದರು.

ಇದು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಗಳಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು. ಈ ವೇಳೆ ಶಾ ಮಹಾರಾಷ್ಟ್ರದ ಸಹಕಾರಿ ಚಳವಳಿಯ ಪಿತಾಮಹ ಪದ್ಮಶ್ರೀ ವಿಠಲರಾವ್ ಪಾಟೀಲ್ ಅವರನ್ನು ಸಹ ಸ್ಮರಿಸಿಸುತ್ತಾ, ವಿಶ್ವದ ಮೊದಲ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸುವ ಮೂಲಕ ರೈತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವಲ್ಲಿ ವಿಠಲರಾವ್ ಪಾಟೀಲ್ ಐತಿಹಾಸಿಕ ಪ್ರಗತಿಯನ್ನು ಸಾಧಿಸಿದ್ದಾರೆ. ವಿಠಲರಾವ್ ಪಾಟೀಲ್ ಅವರ ದೃಷ್ಟಿಕೋನವು ವ್ಯಾಪಾರಿಗಳಿಗಿಂತ ರೈತರನ್ನು ನೇರವಾಗಿ ಸಬಲೀಕರಣಗೊಳಿಸಿತು, ಇದು ಒಂದು ಪ್ರಮುಖ ಬದಲಾವಣೆಯಾಗಿದೆ ಎಂದು ಅವರು ಹೇಳಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!