ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ (ರಿ.) ಮಂಗಳೂರು, ಮಂಗಳೂರು ನಗರ ಪೊಲೀಸ್ ಹಾಗೂ ರೋಶಿನಿ ನಿಲಯ ವಿದ್ಯಾಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಬಸ್ಸು ನಿಲ್ದಾಣ ಸ್ಟೇಟ್ ಬ್ಯಾಂಕ್ ಬಳಿ ನಡೆಯಿತು.
ರೋಶನಿ ನಿಲಯ ವಿದ್ಯಾಸಂಸ್ಥೆಯ ಅಪರಾಧ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಾರಿಕ್ ಅಂಕಿತ ಹಾಗೂ ಅವರ ವಿದ್ಯಾರ್ಥಿಗಳಿಂದ ‘ಜನ ಜಾಗೃತಿ’ ಬೀದಿ ನಾಟಕ ಕಾರ್ಯಕ್ರಮ ನಡೀತು.