ಬಂಟ್ವಾಳ: ಕಾಮಾಜೆಯ ದೈಪಲದಲ್ಲಿರುವ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಹಾಗೂ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ಶಿವಾಜಿನಗರದ ವತಿಯಿಂದ ಶ್ರೀರಾಮ ನವಮಿಯ ಅಂಗವಾಗಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗವು ಮಾರ್ಚ್ 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ Keshava Daipala ತಿಳಿಸಿದ್ದಾರೆ.
ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೇದಮೂರ್ತಿ Rajagopalacharya ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದು ಮಾಹಿತಿ ನೀಡಿದರು.
ರಾತ್ರಿ 8 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಡಾ. Prabhakar Bhat, ಸಂಸದ Brijesh Chowta, ಶಾಸಕ Rajesh Naik ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕಳೆದ 15 ವರ್ಷಗಳಿಂದ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರನ್ನು ಆಕರ್ಷಿಸಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಮಂದಿರದ ಜೀರ್ಣೋದ್ಧಾರ ಕಾರ್ಯ ಕೈಗೊಳ್ಳುವ ಯೋಜನೆ ಇದ್ದು, ಸೀತಾಮಾತ ಕಲ್ಯಾಣ ಮಂಟಪ ನಿರ್ಮಾಣದ ದೊಡ್ಡ ಯೋಜನೆಯನ್ನು ಕೂಡ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಚಂದಪ್ಪ ಮೇಸ್ತ್ರಿ ರಾಜೀವಪಲ್ಕೆ, ಹರೀಶ್ ದೈಪಲ, ನಾರಾಯಣ ಮಾಸ್ಟರ್ ರಾಜೀವಪಲ್ಕೆ, ವಾಣಿ ಕೇಶವ ದೈಪಲ, ಸುರೇಖ, ಅಶೋಕ್ ಕಾಮಾಜೆ ಸೇರಿದಂತೆ ಇತರರು ಉಪಸ್ಥಿತರಿದ್ದರು.