ಕೊಕ್ಕಡ ಸಮೀಪ ಸರ್ಕಾರಿ ಬಸ್–ಕಾರಿನ ಮುಖಾಮುಖಿ ಡಿಕ್ಕಿ — ಮಹಿಳೆಗೆ ಗಾಯ

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.


ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಕಾಪಿನಬಾಗಿಲು ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಕವಿತಾ ಎಂಬವರು ಸಣ್ಣಪುಟ್ಟ ಗಾಯಗೊಂಡಿದ್ದು ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಕವಿತಾ ಅವರಿಗೆ ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!