ಉಡುಪಿ ಜಿಲ್ಲೆಗೆ ಭೋವಿ ಸಮಾಜದ ಮಾನವೀಯ ಮೇರೆಗೆ ಜಿಲ್ಲೆಗೆ ಪ್ರಪ್ರಥಮವಾಗಿ ಆಗಮಿಸುತ್ತಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರ ಪ್ರವಾಸದ ವಿವರವನ್ನು ಭೋವಿ ಸಮಾಜದ ಯುವ ಮುಖಂಡ ಪವನ್ ಕುಮಾರ್ ಶಿರ್ವ ನೀಡಿದರು..
ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಪವನ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತಿ ಪ್ರಮಾಣ ಪತ್ರದ ಬಗ್ಗೆ ಅಧ್ಯಕ್ಷರೊಂದಿಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಮನವಿ ಮಾಡುತ್ತೇವೆ.. ಒಂದು ವೇಳೆ ಜಿಲ್ಲೆಯಲ್ಲಿ ಸಮಸ್ಯೆ ಬಗ್ಗೆ ಹರಿಯದಿದ್ದರೆ ಉಗ್ರ ಹೋರಾಟ ಖಚಿತ ಎಂದು ಪವನ್ ಕುಮಾರ್ ಎಚ್ಚರಿಸಿದರು..
ರಾಜಕಾರಣಿಗಳು ಈ ಬಗ್ಗೆ ಚರ್ಚೆ ಮಾಡಿ ಸರಿಪಡಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ನಮ್ಮ ಜಾನಾಂಗ ಏನು ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು..