ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ₹2.1 ಕೋಟಿ ಅನುದಾನದ ಅಡಿಯಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ ಹಾಗೂ ಸುಸಜ್ಜಿತ ಮೇಲ್ಛಾವಣಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ದ. ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ನಿಲ್ದಾಣದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಇದನ್ನು ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ರಾಮ ಅಮೀನ್ ಪಚ್ಚನಾಡಿ, ತಿಲಕ್‌ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ದಿನಕರ ಇಡ್ಯ, ಬಾಲಕೃಷ್ಣ ಶೆಟ್ಟಿ ಕೆಂಚನೂರು ಮಾಜಿ ಮ.ನ.ಪಾ ಸದಸ್ಯರಾದ ಶ್ವೇತಾ ಪೂಜಾರಿ, ಸರಿತಾ ಶಶಿಧರ್, ಕೊಂಕಣ್ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!