ಪುತ್ತೂರು: ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡೆಯಾರ್ ವಿಟ್ಲ ಅವರನ್ನು ಪುತ್ತೂರಿನಲ್ಲಿ ನಡೆದ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ರಾಜೇಶ್ ಎಂ. ಕಾಮತ್ ಅವರು ಸುದರ್ಶನ್ ಪಡೆಯಾರ್ ಅವರನ್ನು ಗೌರವಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಾಜಿ ಅಧ್ಯಕ್ಷ ವಿಜಯ ವಿಷ್ಣುಮಯ್ಯ, 2026-28ನೇ ಸಾಲಿನ ಅಧ್ಯಕ್ಷ ಹೇಮಾರಾವ್, ಕಾರ್ಯದರ್ಶಿ ಸೀಮಾ ಮಯ್ಯ, ರಚನಾ ಕಾಮತ್, ಕಾರ್ಯದರ್ಶಿ ವಿನಾಯಕ್ ಪೈ, ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್ ಗೌಡ, ಕಾರ್ಯದರ್ಶಿ ಆನಂದ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷೆ ಪ್ರೇಮಲತಾ ರಾವ್, ಕೋಶಾಧಿಕಾರಿ ಸುಂದರ ಗೌಡ, ಕೃಷ್ಣಪ್ರಶಾಂತ್, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ಆರ್.ಸಿ. ಆನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.