ಪುತ್ತೂರಿನ ಕೂರ್ನಡ್ಕದಲ್ಲಿ ಹಲವಾರು ಹಿರಿಯರು ಮತ್ತು ಯುವಕರು SDPI ಪಕ್ಷಕ್ಕೆ ಸೇರ್ಪಡೆ.

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮವು ಕೂರ್ನಡ್ಕದಲ್ಲಿ ನಡೆಯಿತು.


ಪ್ರಸಕ್ತ ರಾಜಕೀಯ ಸನ್ನೀವೇಶ ಮತ್ತು ಪಕ್ಷದ ತತ್ವ ಸಿದ್ದಾಂತದ ಕುರಿತು SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ ಸವಿಸ್ತಾರವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಸುಮಾರು 22 ಮಂದಿ ಹಿರಿಯರು ಮತ್ತು ಯುವಕರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಕಾರ್ಯಕ್ರಮದಲ್ಲಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸಿರಾಜ್ ಕೂರ್ನಡ್ಕ, SDPI ಪುತ್ತೂರು ನಗರ ಸಮಿತಿ ಅಧ್ಯಕ್ಷರಾದ ಯಹ್ಯಾ ಕೂರ್ನಡ್ಕ, ಉಪಾಧ್ಯಕ್ಷರಾದ ಶಮೀರ್ ನಾಜೂಕ್, ಸಂಜಯ್ ನಗರ ಬ್ರಾಂಚ್ ಸಮಿತಿ ಅಧ್ಯಕ್ಷರಾದ ಹಾರಿಸ್ ಪಠಾಣ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!