ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ ನಡೆದಿದೆ:ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್‌.ವಿ

ಮಂಗಳೂರು:ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ ನಡೆದಿದೆ ಎಂದು ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್‌.ವಿ ಹೇಳಿದ್ದಾರೆ.ಮಂಗಳೂರು ನಗರದಲ್ಲಿ ಹೆಲಿಕಾಪ್ಟರ್‌ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಅವರು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದರು.

ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ, ವಿಐಪಿ ಗಳಿಗೆ, ಹೆಲಿಟ್ಯೂರಿಸಮ್‌ಗೆ ಹೆಲಿಪ್ಯಾಡ್ ಅಗತ್ಯವಿದೆ.ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು ಆಗಮಿಸುವಾಗ ಪ್ರತಿಬಾರಿಯೂ ಸಮಸ್ಯೆ ಎದುರಾಗುತ್ತಿದೆ. ಹೆಲಿಟೂರಿಸಮ್ ಗೂ ಶಾಶ್ವತ ಹೆಲಿಪಾಡ್ ಹೆಚ್ಚು ಅನುಕೂಲವಾಗುತ್ತದೆ ಎಂದು ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!