ಮಂಗಳೂರು:ಪ್ರಧಾನಿ ಮೋದಿ ಅಮೆರಿಕಕ್ಕೆ ಶರಣಾಗಿದ್ದಾರೆ (Epstein Files) ಎಂದು ಆರೋಪಿಸಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಲಾಲ್ಬಾಗ್ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆಯನ್ನು ನಡೆಸಿದರು .
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವವಹಿಸಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ರಾಜ್ಯ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್, ಡೆನ್ನಿಸ್ ಡಿಸಿಲ್ವ, ಸುಹಾನ್ ಆಳ್ವ ಮತ್ತಿತರರು ಇದ್ದರು.