ಕರಾವಳಿ ಕರ್ನಾಟಕದಲ್ಲಿ ಹವಾಮಾನ ತೀವ್ರತೆ: ಮೀನುಗಾರರಿಗೆ ಮುನ್ನೆಚ್ಚರಿಕೆ ಸೂಚನೆ

ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಹಾಗು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿಯಲ್ಲಿ 5, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಶೃಂಗೇರಿ, ಭಾಗಮಂಡಲದಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.

ಕರಾವಳಿ ಭಾಗದ ಸಮುದ್ರ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಗಾಳಿ ಬೀಸಲಿದ್ದು, ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!