ಪುತ್ತೂರು: ಇನ್ನೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಯಾರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಕುತೂಹಲ ಮನೆಮಾಡಿದೆ. ಈ ನಡುವೆ ಬಹುತೇಕ ಕಾಂಗ್ರೆಸ್ ಶಾಸಕರು ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದು, ಕೆಲವರು ದೆಹಲಿಗೂ ಪಯಣ ಬೆಳೆಸಿದ್ದಾರೆ.
ಸಚಿವ ಸ್ಥಾನಕ್ಕಾಗಿ ಎಲ್ಲೆಡೆ ಲಾಬಿ ನಡೆಯುತ್ತಿದೆ.ಆದರೆ ಇದೆಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್ ರೈ ಯಾವುದೇ ಲಾಬಿಗೂ ಮುಂದಾಗದೆ ತಮ್ಮ ಕ್ಷೇತ್ರದ ಜನರ ಜೊತೆ ಬೆರೆತಿದ್ದಾರೆ. ಸೋಮವಾರ ಎಂದಿನಂತೆ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರದಲ್ಲಿ ತೊಡಗಿಸಿಕೊಂಡಿದ್ದಾರೆ.