ಚಿಲಿಂಬಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ; ₹50 ಲಕ್ಷ ವಿಶೇಷ ಅನುದಾನದಲ್ಲಿ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 50ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ನಂತರ ಮಾತನಾಡಿದ ಶಾಸಕರು ಈ ಭಾಗದ ಸ್ಥಳೀಯರ ಬೇಡಿಕೆಯ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿಯಲ್ಲಿ ಕಾಮಗಾರಿ ವಹಿಸಿಕೊಂಡವರೂ ಸಹ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಶೀಘ್ರದಲ್ಲಿ ಕಾರ್ಯ ಮುಗಿಯುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು.

ನಿಕಟಪೂರ್ವ ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಸೋಮಶೇಖರ್ ಚಿಲಿಂಬಿ, ರಾಕೇಶ್ ಸಾಲ್ಯಾನ್, ಸುರೇಶ್ ರಾವ್, ಅರುಣ್ ಉರ್ವ, ಪ್ರವೀಣ್ ನಿಡ್ಡೆಲ್, ಗಣೇಶ್ ಭಟ್, ಸುರೇಶ್ ಬಾಳಿಗ, ಶ್ರೀಪಾದ್ ರಾಯತ್, ಚನ್ನಕೇಶವ, ರಜತ್ ಚಿಲಿಂಬಿ, ರಾಜ್ ಕುಮಾರ್ ಶೆಟ್ಟಿ, ಮನೋಜ್ ಕುಮಾರ್ ಶೆಟ್ಟಿ, ರಜತ್ ಕುಲಾಲ್, ದೀಪಕ್ ಶೆಟ್ಟಿ, ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!