ಮಂಗಳೂರು: ತುಳುನಾಡಿನ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಬಿಜೈ ಮಂಗಳೂರಿನ ಸ್ಮಾರ್ಟ್ ಬಜಾರ್ ವತಿಯಿಂದ ಆಟಿ ತಿಂಗಳ ಆಚರಣೆಯನ್ನು ಆಯೋಜಿಸಲಾಯಿತು.



ಕಾರ್ಯಕ್ರಮದಲ್ಲಿ ತುಳುನಾಡಿನ ಸಂಪ್ರದಾಯಿಕ ಆಚರಣೆಗಳು, ಆಟಿ ತಿಂಗಳ ವಿಶೇಷತೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ಕಾರ್ಯಕ್ರಮಗಳು ನಡೆಯಿತು.


ಈ ಸಂದರ್ಭದಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಹಾರ ಪದಾರ್ಥಗಳು, ಆಟಿ ತಿಂಗಳ ವಿಶೇಷ ಖಾದ್ಯಗಳು ಹಾಗೂ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು.

ಮಹಿಳೆಯರಿಗಾಗಿ ಏರ್ಪಡಿಸಿದ ಈ ಕೂಟದಲ್ಲಿ ವಿವಿಧ ಮನೋರಂಜನೆ ಆಟ , ತುಳುನಾಡು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಛದ್ಮ ವೇಷ ,ಮನಸೂರೆಗೊಂಡಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಎನ್ ಮನೋಹರ್ ಕುಮಾರ್ ಮಂಗಳೂರು, ಶ್ರೀಮತಿ ಲಲಿತ ಉಪಾಧ್ಯಾಯ ಮಂಗಳಾದೇವಿಯವರು ಭಾಗವಹಿಸಿ ಶುಭ ಹಾರೈಸಿದರು .

ಶ್ರೀಮತಿ ಕುಸುಮ ನವೀನ್ ಕುಮಾರ್ ಕಾರ್ಯಕ್ರಮ ಸಂಯೋಜನೆ ಮಾಡಿದರು.


ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಿ ತುಳುನಾಡಿನ ಸಂಸ್ಕೃತಿಯ ಸೊಬಗನ್ನು ಸವಿದರು. ಸ್ಮಾರ್ಟ್ ಬಜಾರ್ ವತಿಯಿಂದ ಇಂತಹ ಕಾರ್ಯಕ್ರಮಗಳ ಮೂಲಕ ಸ್ಥಳೀಯ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಮಾಡಲಾಗುತ್ತಿದೆ.

