ಮಂಗಳೂರು:ಲೇಖಕಿ ಶಕುಂತಲಾ ಶಿವರಾಮ್ ಅವರ ಕೃತಿ ಹಾಗೂ ವಿಮರ್ಶಕಿ ಡಾ. ರಾಜಲಕ್ಷ್ಮೀ ಅವರ ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದಿಸಿದ ‘ಅಂಡಮಾನ್ ಇತಿಹಾಸದೊಳಗೊಂದು ಪಯಣ’ ಕೃತಿಯ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವು ಆಗಸ್ಟ್ 8ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಲಿದೆ.

ಮಂಗಳೂರಿನ ಅನೇಕಾಂತ ಫೌಂಡೇಶನ್ ಟ್ರಸ್ಟ್ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರೊ. ವಿಜಯ ಪೂಣಚ್ಚ ತಂಬಂಡ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಚೇಳಾರು ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಜ್ಯೋತಿ ಚೇಳಾರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊ. ಗಣಪತಿ ಗೌಡ ಎಸ್. ಕೃತಿಯ ಕುರಿತು ಮಾತನಾಡಲಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಟಿ. ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


