ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರ ಕೊಟ್ಲು ಟೋಲ್ ಗೇಟ್ ಅವಧಿ ಮತ್ತು ನಿಯಮ ಮೀರಿ ಕಳೆದ 25 ವರ್ಷಗಳಿಂದ ಅವೈಜ್ಞಾನಿಕ ರಸ್ತೆಯಲ್ಲಿ ಟೂಲ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಎಸ್ ಡಿ ಪಿ ಐ ಪಕ್ಷದ ನೇತೃತ್ವದಲ್ಲಿ ಇಂದು ಬ್ರಹ್ಮರ ಕೊಟ್ಲು ಟೋಲ್ ಗೇಟ್ ಬಳಿಯಿಂದ ಡಿ ಸಿ ಕಚೇರಿ ಚಲೋ ಜಾಥಾ ನಡೆಯಿತು.

ಈ ಪಾದಯಾತ್ರೆಯಲ್ಲಿ ಅನೇಕ ಮಂದಿ ಪಾಲ್ಗೊಂಡು ಪಡೀಲ್ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ಪಾದಯಾತ್ರೆಯಲ್ಲಿ ಪ್ರತಿಭಟನಾಕಾರರು ಟೋಲ್ ತೆರವು ಮಾಡಬೇಕೆಂದು ಆಗ್ರಹಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎಸ್ ಡಿಪಿಐ ನಾಯಕರಾದ ರಿಯಾಝ್ ಫರಂಗಿಪೇಟೆ, ಅನ್ವರ್ ಸಾದಾತ್ ಬಜತ್ತೂರು, ಅಶ್ರಫ್ ಅಡ್ಡೂರು, ಅಲ್ಪಾನ್ಸೋ ಫ್ರಾಂಕೋ ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.



