ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ , ಹೀಗೆಂದರೇಕೆ ಸ್ಪೀಕರ್ ಯು.ಟಿ.ಖಾದರ್ …. !

ಮಂಗಳೂರು: ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಜ್ಯದಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ ಅವರು , ನಾನು ಇತರರು ಮಾತನಾಡಿದ ರೀತಿಯಲ್ಲಿ ಮಾತನಾಡಲು ಆಗುವುದಿಲ್ಲ. ಈ ವಿಷಯ ನನಗೆ ನಿಮ್ಮಿಂದಲೇ ತಿಳಿದಿರುವುದು. ಸ್ಪೀಕ‌ರ್ ಆದ ಬಳಿಕ ನನ್ನ ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ .

ಇದೇ ಸಮಯ ಮಾಧ್ಯಮ ಪತ್ರಿನಿಧಿಗಳು ಎತ್ತಿದ ಭ್ರಷ್ಟಾಚಾರದ ಆರೋಪಕ್ಕೆ ಉತ್ತರಿಸಿದ ಖಾದರ್ , ಸತ್ಯ ಯಾವಾಗಲೂ ದಾಖಲೆಯಲ್ಲಿ ಇರುತ್ತದೆ. ಆರೋಪ ಮಾಡಿದವರು ಯಾವುದನ್ನೂ ಲಿಖಿತವಾಗಿ ಸ್ಪೀಕರ್ ಕಚೇರಿಗೆ ನೀಡಿಲ್ಲ. ಹಾಗಾಗಿ ಇದೆಲ್ಲಾ ಚರ್ಚೆಯಾಗುವ ವಿಷಯವೇ ಅಲ್ಲ. ಹಾಗಾಗಿ ಇದರ ಬಗ್ಗೆ ನಾನು ಹೆಚ್ಚೇನೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು .

ಜವಾಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಗಳು ಆರೋಪ ಮಾಡುವ ಮೊದಲು ಆ ಬಗ್ಗೆ ಅಧ್ಯಯನ ಮಾಡಲಿ. ಏನೇ ಆಕ್ಷೇಪವಿದ್ದರೂ ಆ ಬಗ್ಗೆ ಲಿಖಿತವಾಗಿ ದೂರು ನೀಡಬಹುದು. ಸಾಹಿತಿಗಳಿಗೆ 25000 ರೂ. ಶಾಲು ಹಾಕಲಾಗಿದೆ ಎಂದು ದೂರಲಾಗಿದೆ. ಸಾಹಿತಿಗಳಿಗೆ ಗೌರವ ನೀಡುವಾಗ ಅದಕ್ಕೆ ತಕ್ಕ ರೀತಿಯಲ್ಲಿಯೇ ಸನ್ಮಾನಿಸಬೇಕಾಗುತ್ತದೆ. ಅದು ರೇಷ್ಮೆಯ ಶಾಲು. ಅದನ್ನು ಕರ್ನಾಟಕ ರಾಜ್ಯ ಸಿಲ್ಕ್ ಬೋರ್ಡ್‌ನಿಂದಲೇ ಖರೀದಿಸಲಾಗಿದೆ ಎಂದವರು ಹೇಳಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!