ಡಿ 13 ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಆಚರಣೆ

ಮಂಗಳೂರು:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಜಂಟಿ ಆಚರಣೆಯು ಡಿ 13 ರಂದು ಬೆಳಿಗ್ಗೆ ೯.೩೦ ರಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ಬಿರ್ವಾ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು , ಮಾಜಿ ಸೈನಿಕರಾದ ನೋಬರ್ಟ್ ರೋಡಿಗ್ರಾಸ್ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಸಭೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷರಾದ ಡಾ| ಶಿವಣ್ಣ ಎನ್. ಕೆ. ಹಾಗೂ ಮಹಾ ಪೋಷಕರು ಮಾಜಿ ಸಂಸದೆಯಾದ ಡಾ| ತೇಜಸ್ವಿನಿ ಗೌಡ, ಶಾಸಕರುಗಳಾದ ಅಶೋಕ್ ರೈ ಹಾಗೂ ಶಾಸಕಿ ಭಗೀರತಿ ಮುರುಳ್ಯ , ಪುತ್ತೂರು ಸಹಾಯಕ ಆಯ್ತುರಾದ ಸ್ಟೇಲಾ ವರ್ಗೀಸ್, ಇ.ಸಿ.ಹಚ್.ಎಸ್ ಆಯ್ತುರಾದ ಕರ್ನ್‌ಲ್ ಬೀಡೆ, ಕೌಕ್ರಾಡಿ ಪಂಚಾಯತ್ ಅಧ್ಯಕ್ಷರಾರ ಉದಯ್ ಕುಮಾರ್ ಗೌಡ ಹಾಗೂ ಹಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು, ವೀರ ನಾರಿಯರು, ಕಡಬ, ಬಂಟ್ವಾಳ, ಬೆಳ್ತಾಂಗಡಿ, ಪುತ್ತೂರು ಮತ್ತು ಮಂಗಳೂರು ತಾಲ್ಲೂಕು ಘಟಕಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರಲಿದ್ದಾರೆ ಎಂದರು .

1971ರಲ್ಲಿ ಇಂಡೋ ಪಾಕ್ ಯುದ್ಧದಲ್ಲಿ ಭಾಗಿಯಾದ ಈ ಪ್ರದೇಶದ ವೀರ ಯೋಧರಿಗೆ ಹಾಗೂ ವೀರ ನಾರಿಯರಿಗೆ ಗೌರವ ಸಮರ್ಪಣೆ ನಡೆಯಲಿದೆ ಎಂದು ತಿಳಿಸಿದರು . ಮಾಜಿ ಸೈನಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ ಎಂದರು .

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರಾದ ಗೋಪಾಲ ಗೌಡ , ಎಂ ಪಿ ತಂಗಚ್ಛನ್ , ಸೆಬಾಸ್ಟೀನ್ , ಚಂದಪ್ಪ , ಧನಂಜಯ್ ಮುಂತಾದವರು ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!