ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಆಯೋಜಿಸಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್, ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು.ಎಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷ ಎಂ.ಜಿ.ಶಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ ಎಸ್.ಎಂ.ಅಝೀಝ್ ಕೈಕಂಬ, ಅಬ್ದುಲ್ ಜಲೀಲ್ ಅರಳ ಹಾಗೂ ಅಬುಧಾಬಿಯ ಬ್ಯಾರೀಸ್ ವೆಲ್ವೇರ್ ಫೋರಂ ಸದಸ್ಯ ಇಲ್ವಾನ್ ಅಹ್ಮದ್ ಉಪಸ್ಥಿತರಿದ್ದರು.
Yo, checked out Bet291 and gotta say, not bad! Site’s clean, easy to navigate. Seems like a decent spot to throw down a few bets. Give it a shot! bet291