ಕಳ್ಳಾಡಿ ಭೂಕುಸಿತ ದುರಂತ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ, 9 ಮಂದಿಗೆ ರಕ್ಷಣೆ

ವಯನಾಡಿನ ಮೇಪ್ಪಾಡಿ ಸಮೀಪದ ಕಳ್ಳಾಡಿ ಸುರಂಗ ಮಾರ್ಗ ನಿರ್ಮಾಣ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ರಕ್ಷಿಸಲ್ಪಟ್ಟ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಈ ದುರಂತದ ಬೆಚ್ಚಿಬೀಳಿಸುವ ದೃಶ್ಯಗಳು ಹೊರಬಿದ್ದಿವೆ. ಭೂಕುಸಿತದ ವೇಳೆ ಟ್ಯಾಂಕರ್ ಲಾರಿ ಅತೀವೇಗವಾಗಿ ಹಿಂದಕ್ಕೆ ಸರಿಯುತ್ತಿದ್ದಾಗ ಅದರ ನಡುವೆ ಜನರು ಸಿಲುಕಿ, ಅದೃಷ್ಟವಶಾತ್ ಪಾರಾಗುತ್ತಿರುವ ದೃಶ್ಯಗಳೂ ವೈರಲ್ ಆಗಿವೆ.

ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಈ ಭೀಕರ ದುರಂತ ಸಂಭವಿಸಿದೆ. ಮಣ್ಣು ಮತ್ತು ನೀರು ಭಾರೀ ವೇಗದಲ್ಲಿ ಹರಿದು ಬಂದು ಬಸ್ ಹಾಗೂ ಸೇತುವೆಯನ್ನು ಮುಚ್ಚಿಹಾಕಿತು. ಭಾರೀ ಮಳೆಯಿಂದಾಗಿ ಸುರಂಗ ಮಾರ್ಗ ನಿರ್ಮಾಣಕ್ಕಾಗಿ ರಾಶಿಯಾಗಿ ಹಾಕಿದ್ದ ಮಣ್ಣು ಕುಸಿದು ಹರಿದುಬಂದಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. NDRF ತಂಡಗಳು ಸ್ಥಳಕ್ಕೆ ಆಗಮಿಸಿವೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಪರಿಸ್ಥಿತಿಯ ಪರಿಶೀಲನೆ ನಡೆಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!