ನಿರ್ಮಾಣ ಸಾಮಗ್ರಿಗಳ ಮೇಲಿನ ನಿಯಂತ್ರಣ: ಕೇರಳಕ್ಕೆ ವಿನಾಯಿತಿ ನೀಡಲು ತಮಿಳುನಾಡು ಚಿಂತನೆ

ತಿರುವನಂತಪುರಂ: ಮೆಟಲ್ ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ತಮಿಳುನಾಡು ಸರ್ಕಾರ ವಿಧಿಸಿರುವ ನಿಯಂತ್ರಣಗಳಿಂದ ಕೇರಳಕ್ಕೆ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಿಳಿಸಿರುವುದಾಗಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹೇಳಿದ್ದಾರೆ.

ನಿನ್ನೆ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ನಡೆದ ಭೇಟಿಯಲ್ಲಿ ವಿ.ಡಿ. ಸತೀಶನ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಕೇರಳದ ವಿಶೇಷ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಕುರಿತು ಎರಡೂ ರಾಜ್ಯಗಳ ನಡುವೆ ಮತ್ತಷ್ಟು ಚರ್ಚೆ ನಡೆಸಿ, ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲು ಉಭಯ ಮುಖ್ಯಮಂತ್ರಿಗಳ ನಡುವೆ ಒಮ್ಮತ ಮೂಡಿದೆ ಎಂದು ಸತೀಶನ್ ತಿಳಿಸಿದರು.

ಈ ಹಿಂದೆ ಕೂಡ ಇದೇ ವಿಚಾರವಾಗಿ ಕ್ರಮ ಕೈಗೊಳ್ಳುವಂತೆ ವಿ.ಡಿ. ಸತೀಶನ್ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!