ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ವರ್ಕಾಡಿ ಸಮೀಪದ ಕೋಳ್ಯೂರು ಪದವು ನಿವಾಸಿ ನವ್ಯ (28) ಸಾವನ್ನಪ್ಪಿದ ದುರ್ದೈವಿ. ಇವರ ಪತಿ ಪದ್ಮನಾಭ(36) ಹಾಗೂ ಮಗು ಗಾಯನ್ ಎಂಬಿವರು ಗಾಯಗೊಂಡು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೃತ ನವ್ಯಾ ಅವರು ತಲಪ್ಪಾಡಿಯ ಗೇರೇಜ್ ಮಾಲಕ ಶಿವರಾಮ ಆಚಾರ್ಯ ರ ಪುತ್ರಿಯಾಗಿದ್ದು, ಔಷಧಿಗೆಂದು ಕಾರಿನಲ್ಲಿ ತೆರಳುತ್ತಿದ್ದರು.
ಉಪ್ಪಳ ಭಾಗದಿಂದ ಮಂಗಳೂರು ಕಡೆ ತೆರಳುತಿದ್ದ ಕಾರು ಹಾಗೂ ಮಂಗಳೂರು ಭಾಗದಿಂದ ಕಾಸರಗೋಡು ಕಡೆ ಸಾಗುತಿದ್ದ ಮೀನಿನ ಲಾರಿ ಪರಸ್ಪರ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವೃತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಲಾರಿ ಪಲ್ಟಿಯಾಗಿ ಕೆಳಗೆ ಬಿದ್ದಿದೆ. ಶುಕ್ರವಾರ ಮಧ್ಯಾಹ್ನ 2.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳದಲ್ಲೇ ನವ್ಯ ಕೊನೆಯುಸಿರೆಳೆದಿದ್ದಾಳೆ. ಕಾರಿನಲ್ಲಿದ್ದ ಇತರರನ್ನು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.