ಮಂಜೇಶ್ವರ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಗೆಲುವಿಗೆ ಶ್ರಮಿಸಲು ಶೋಭಾ ಕರಂದ್ಲಾಜೆ ಕರೆ

ಬಿಜೆಪಿ ನೇತೃತ್ವದ ಎನ್‌ಡಿಎ ಮಂಜೇಶ್ವರ ಮಂಡಲ ಚುನಾವಣಾ ಕಾರ್ಯಾಲಯವು ಉಪ್ಪಳದ ಸೋಂಕಾಲಿನಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಕೇಂದ್ರ ಉದ್ಯೋಗ ಖಾತೆ ಸಹ ಸಚಿವೆ ಹಾಗೂ ಕೇರಳ ವಿಧಾನಸಭಾ ಚುನಾವಣೆಯ ಕೋಝಿಕ್ಕೋಡ್ ವಲಯ ಉಸ್ತುವಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇನ್ನುಳಿದ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಮಂಜೇಶ್ವರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಕೇರಳದಲ್ಲಿ ಈ ಬಾರಿ ಬಿಜೆಪಿ ನಿರ್ಣಾಯಕ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ. ಪ್ರಬಲ ತೃತೀಯ ಶಕ್ತಿಯಾಗಿ ಬೆಳೆಯುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ M. L. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಸಂಭಾವ್ಯ ಅಭ್ಯರ್ಥಿ K. ಸುರೇಂದ್ರನ್ , ಮಂಗಳೂರು ಉತ್ತರ ಶಾಸಕ Dr. ಭಾರತ್ ಶೆಟ್ಟಿ , ಕೋಝಿಕ್ಕೋಡ್ ವಲಯಾಧ್ಯಕ್ಷ K. ಶ್ರೀಕಂಠ , ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

ಇದೇ ವೇಳೆ ರಾಜ್ಯ ಸಮಿತಿ ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..

SHARE
Loading spinner

Leave a Reply

Your email address will not be published. Required fields are marked *

error: Content is protected !!