ಅಂಬಾರು ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದುಪೂರ್ವಭಾವಿ ಸಭೆ ಸಮಾಪ್ತಿ

ಉಪ್ಪಳ:ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಅಂಬಾರು ಶ್ರೀ ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದು ಶನಿವಾರ ನಡೆಯಲಿದೆ.ಈ ಬಗ್ಗೆ ಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಮಿತಿಯನ್ನು ರೂಪೀಕರಿಸಲಾಯಿತು.


ಪೂರ್ವಭಾವಿ ಸಭೆಯಲ್ಲಿ ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಶ್ರೀಗಳು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಜೊತೆಯಾಗಿ ಸಹಕರಿಸುವಂತೆ ಅವರು ಈ ಸಂಧರ್ಭದಲ್ಲಿ ಸೂಕ್ತ ಸಲಹೆ ನೀಡಿದರು.

ಸಭೆಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ವಾಸುದೇವ ಹೊಳ್ಳ ,ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶ್ರೀ ಎಚ್ ಕೆ ಶೆಟ್ಟಿ ,ಸೇವಾ ಸಮಿತಿಯ ಗೌರವಾಧ್ಯಕ್ಷ ಶ್ರೀ ಕೊರಗಪ್ಪ ಶೆಟ್ಟಿ ,ಯುವ ನಾಯಕ ಗ್ರಾಮ ಪಂಚಾಯತ್ ಸದಸ್ಯ ಶ್ರೀ ವಿಜಯಕುಮಾರ್ ರೈ ಸೇರಿದಂತೆ ಆಡಳಿತ ಸಮಿತಿ ಮತ್ತು ಸೇವಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!