ಕಾಸರಗೋಡು: ಮಡಿಕೈಯ ಕಣಚ್ಚಿರದಲ್ಲಿ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಎಸ್ಇಬಿ ಲೈನ್ಮ್ಯಾನ್ ಮೃತಪಟ್ಟ ಘಟನೆ ಇಂದು (ಶುಕ್ರವಾರ) ಬೆಳಿಗ್ಗೆ ನಡೆದಿದೆ.

ಮೃತಪಟ್ಟವರನ್ನು ಕೆಎಸ್ಇಬಿ ಮಾವುಂಗಾಲ್ ಸೆಕ್ಷನ್ನ ಲೈನ್ಮ್ಯಾನ್, ಪುಲ್ಲೂರು ಮಧುರಂಪಾಡಿಯ ಭರತನ್ (52) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ವಿದ್ಯುತ್ ಲೈನ್ ದುರಸ್ತಿ ಕಾರ್ಯಕ್ಕಾಗಿ ಕಂಬವೇರಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದೆ. ವಿದ್ಯುತ್ ತಂತಿಯಲ್ಲೇ ಸಿಲುಕಿದ್ದ ಮೃತದೇಹವನ್ನು ಬಳಿಕ ಸ್ಥಳಕ್ಕೆ ಆಗಮಿಸಿದ ಕಾಂಞಂಗಾಡ್ ಅಗ್ನಿಶಾಮಕ ದಳದ ಸಿಬ್ಬಂದಿ ಕೆಳಗಿಳಿಸಿದರು. ಮೃತದೇಹವನ್ನು ಕಾಂಞಂಗಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

