ಮಂಜೇಶ್ವರ ಪಂಚಾಯತ್ ಅಧ್ಯಕ್ಷೆಯ ಜನವಿರೋಧಿ ನೀತಿ ವಿರುದ್ಧ ಮುಸ್ಲಿಂ ಲೀಗ್ ಧರಣಿ

ಮಂಜೇಶ್ವರ : ಮಂಜೇಶ್ವರ ಪಂಚಾಯತ್ ಬೋರ್ಡ್ ಅಧ್ಯಕ್ಷೆ ಯ ಜನವಿರೋಧಿ ನೀತಿ ವಿರುದ್ಧ ಮಂಜೇಶ್ವರ ಪಂಚಾಯತ್ ಮುಸ್ಲಿಂ ಲೀಗ್ ಸಮಿತಿಯ ನೇತೃತ್ವದಲ್ಲಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು.

ಆಸ್ತಿಗಾರಿಕೆ (ಕಟ್ಟಡ ತೆರಿಗೆ) ಹೆಸರಿನಲ್ಲಿ ತೆಗೆದುಕೊಂಡಿರುವ RR ಕ್ರಮವನ್ನು ಹಿಂತೆಗೆದುಕೊಳ್ಳಬೇಕು, ರಸ್ತೆಗಳ ಇಕ್ಕೆಡೆಗಳಲ್ಲಿ ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯಗಳನ್ನು ಕೂಡಲೇ ತೆರವುಗೊಳಿಸಬೇಕು, ಬೀದಿ ನಾಯಿಗಳ ಅಟ್ಟಹಾಸಕ್ಕೆ ಪರಿಹಾರ ಕಂಡುಹಿಡಿಯಬೇಕು, ಕಲ್ಯಾಣ ಪಿಂಚಣಿ ಅರ್ಜಿಗಳನ್ನು ವಿಳಂಬವಿಲ್ಲದೆ ಪರಿಶೀಲಿಸಿ ತೀರ್ಮಾನಿಸಬೇಕು, ಪಂಚಾಯತ್ ಅಧ್ಯಕ್ಷರ ಸಾರ್ವಜನಿಕರೊಡನೆ ಇರುವ ವರ್ತನೆ ಸುಧಾರಿಸಬೇಕು ಎಂಬೀ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾ ಧರಣಿ ಹಮ್ಮಿ ಕೊಳ್ಳಲಾಗಿತ್ತು.

ಪ್ರತಿಭಟನೆಗೆ ಮುಸ್ಲಿಂ ಲೀಗ್ ವಲಯ ಕಾರ್ಯದರ್ಶಿ ಎ.ಕೆ. ಅರಿಫ್ ಚಾಲನೆ ನೀಡಿದರು.. ಪಂಚಾಯತ್ ಮುಸ್ಲಿಂ ಲೀಗ್ ಅಧ್ಯಕ್ಷ ಅಜೀಜ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.

ಹನೀಫ್ ಹಾಜಿ, ಸಿದ್ದಿಕ್ ಹಾಜಿ ಅರಿಮಲ, ಮುಕ್ತಾರ್, ಹನೀಫ್ ಕುಚ್ಚಿ ನಕ್ಕಾಡ್, ಸಮದ್ ಅರಿಮಲ, ಅಬ್ದುಲ್ ರಹೀಮ್ ಹಾಜಿ, ದುಬೈ ಕೆಎಂಸಿಸಿ ನಾಯಕ ಆಸಿಫ್, ಸಮೀರಾ ಮೊದಲಾದವರು ಮಾತನಾಡಿದರು. ಪಕ್ಷದ ಹಿರಿಯ ನೇತಾರ ಮುಸ್ತಫಾ ಉದ್ಯಾವರ ಸ್ವಾಗತಿಸಿ ಮುಂತಾಜ್ ಸಮೀರಾ ಧನ್ಯವಾದ ಅರ್ಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!