ಮನೆಯ ಸಿಟ್ ಔಟ್‌ನಲ್ಲಿ ಪ್ರವಾಸಿ ಯುವಕನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

​ಕಾಸರಗೋಡು : ಚಿತ್ತಾರಿ ಪೋಯ್ಯಕ್ಕರ ಕಲ್ಲಿಂಗಾಲದ ನಿವಾಸಿ ಕೆ.ವಿ. ಕೃಪೇಶ್ (38) ಎಂಬುವವರು ಶನಿವಾರ ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೆಲವು ತಿಂಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ ಕೃಪೇಶ್, ಇಂದು ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯ ಸಿಟ್ ಔಟ್‌ನಲ್ಲಿ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ.

ಮನೆಯವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದರು.

ವಿಷಯ ತಿಳಿಯುತ್ತಿದ್ದಂತೆ ಹೊಸದುರ್ಗ ಪೊಲೀಸರು ಸ್ಥಳಕ್ಕೆ ಧಾವಿಸಿ ಇನ್‌ಕ್ವೆಸ್ಟ್ ನಡೆಸಿದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಮಧ್ಯಾಹ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

SHARE
Loading spinner

Leave a Reply

Your email address will not be published. Required fields are marked *

error: Content is protected !!